ನಾಳೆ ಸಾರಿಗೆ ನೌಕರರಿಂದ ‘ಮೊಂಬತ್ತಿ ಬೆಳಗಿಸಿ’ ವಿನೂತನ ಪ್ರತಿಭಟನೆ : ಕೋಡಿಹಳ್ಳಿ ಚಂದ್ರಶೇಖರ್

Prasthutha|

ಬೆಂಗಳೂರು: ವೇತನ ಹೆಚ್ಚಳಕ್ಕೆ ಒತ್ತಾಯಿಸಿ, ಆರನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ತರಬೇಕೆಂದು ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ನಾಳೆಯೂ ಮುಂದುವರೆಯಲಿದ್ದು, ಮೊಂಬತ್ತಿ ಬೆಳಗಿಸಿ ವಿನೂತನ ಪ್ರತಿಭಟನೆ ನಡೆಸುವುದಾಗಿ ಕೋಡಿಹಳ್ಳಿ ಚಂದ್ರಶೇಖರ್‌ ಹೇಳಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್‌, ‘6ನೇ ಆಯೋಗದ ಜಾರಿಗಾಗಿ ನಡೆಯುತ್ತಿರುವ ಸಾರಿಗೆ ನೌಕರರ ಮುಷ್ಕರ ನಾಳೆಯೂ ಮುಂದುವರೆಯಲಿದೆ. ನಾಳೆ ಮೊಂಬತ್ತಿ ಬೆಳಗಿಸಿ ವಿನೂತನ ಪ್ರತಿಭಟನೆ ಮಾಡಲಿದ್ದೇವೆ. ಸಂಜೆ 6ರಿಂದ 7 ಗಂಟೆಯವರೆಗೆ ಮೊಂಬತ್ತಿ ಬೆಳಗಿಸಿ ವಿಶೇಷ ಚಳುವಳಿ ಮಾಡುತ್ತೇವೆ’ ಎಂದರು.

Join Whatsapp