Home ಟಾಪ್ ಸುದ್ದಿಗಳು ಶಾಲೆಯಲ್ಲಿ ಅವಮಾನ: 8ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ಶಾಲೆಯಲ್ಲಿ ಅವಮಾನ: 8ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ವಿಜಯಪುರ: ಶಾಲೆಯಲ್ಲಿ ಅವಮಾನ ಆಗಿದ್ದಕ್ಕೆ ಎಂಟನೆ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ವಿಜಯನಗರದಲ್ಲಿ ನಡೆದಿದೆ.

ವಿಜಯನಗರದ ಧೀರಜ್ (14) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ರಾಜರಾಜೇಶ್ವರಿನಗರ ಸಮೀಪದ  ಸ್ವರ್ಗರಾಣಿ ಸ್ಕೂಲ್ ನಲ್ಲಿ ಎಂಟನೆ ತರಗತಿ ವ್ಯಾಸಂಗ ಮಾಡುತ್ತಿದ್ದ ಧೀರಜ್ ನಿನ್ನೆ ನಡೆದ ಪರೀಕ್ಷೆ ವೇಳೆ ಕಾಫಿ ಹೊಡೆಯುತ್ತಿದ್ದ ಎನ್ನಲಾಗಿದೆ. ಇದನ್ನ ಗಮನಿಸಿದ ಶಿಕ್ಷಕರು ಪೋಷಕರಿಗೆ ಮಾಹಿತಿ ನೀಡಿ ಬಳಿಕ ಕ್ಷಮಾಪಣ ಪತ್ರವನ್ನು ಕಾಲೇಜು ಪ್ರಾಂಶುಪಾಲರು ಬರೆಸಿಕೊಂಡಿದ್ದರು.

ಇದರಿಂದ ಮನನೊಂದ ಧೀರಜ್ ಮನೆಗೆ ಬಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.

ವಿಜಯನಗರ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

Join Whatsapp
Exit mobile version