ಮುಸ್ಲಿಮ್ ಸಮುದಾಯದ ಬಗ್ಗೆ ಅವಮಾನಕರ ಹೇಳಿಕೆ: ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ದೂರು

Prasthutha|

ಮುಲ್ಕಿ: ಮುಸ್ಲಿಮ್ ಸಮುದಾಯದ ಬಗ್ಗೆ ಅವಮಾನಕರ ರೀತಿಯಲ್ಲಿ ಮಾತನಾಡಿದ ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮುಲ್ಕಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

- Advertisement -

ಕಾರ್ನಾಡು ಗ್ರಾಮದ ಕೆ.ಎಸ್.ರಾವ್ ನಗರ ನಿವಾಸಿ ಬದ್ರುದ್ದೀನ್ ಅವರು ಅರುಣ್ ಬಡಿಗೇರ್ ವಿರುದ್ಧ ದೂರು ನೀಡಿದ್ದಾರೆ.

ಅರುಣ್ ಬಡಿಗೇರ್ ಅವರು ಪಬ್ಲಿಕ್ ಟಿವಿ ನಿರೂಪಕನಾಗಿದ್ದು, ಇತ್ತೀಚೆಗೆ ನಡೆದ ಸಂವಾದ ಕಾರ್ಯಕ್ರಮವೊಂದರಲ್ಲಿ ಮುಸ್ಲಿಮರು ಮತ್ತು ಇಸ್ಲಾಮ್ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದರಿಂದ ನಮ್ಮ ಭಾವನೆಗೆ ಧಕ್ಕೆಯಾಗಿದ್ದು, ಅವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ದೂರಿನಲ್ಲಿ ಬದ್ರುದ್ದೀನ್ ಮನವಿ ಮಾಡಿದ್ದಾರೆ.

- Advertisement -

ದೂರು ಸ್ವೀಕರಿಸಿರುವ ಮುಲ್ಕಿ ಠಾಣೆ ಪೊಲೀಸರು ಮುಂದಿನ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.



Join Whatsapp