ಪೊಲೀಸ್ ಸಿಬ್ಬಂದಿ ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ: ಆರಗ ಜ್ಞಾನೇಂದ್ರ

Prasthutha|

ಬೆಂಗಳೂರು: ಬಹಳ ದಿನಗಳ ಬೇಡಿಕೆಯಾಗಿ ಉಳಿದಿದ್ದ ಪೊಲೀಸ್ ಇಲಾಖೆಯ ಸಿಬ್ಬಂದಿಗೆ ನಿರ್ಬಂಧಿತವಾಗಿದ್ದ ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ ಕೊಡುವ ನಿರ್ಧಾರವನ್ನು ಇಂದಿನ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

- Advertisement -

ಅಂತರ್ ಜಿಲ್ಲಾ ವರ್ಗಾವಣೆ ಸಂಬಂಧ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸಂಪುಟದ ಮುಂದೆ ಪ್ರಸ್ತಾಪಿಸಿ ಅನುಮತಿ ಕೋರಿದ್ದರು.

ಇಲಾಖೆಯಲ್ಲಿ ಯಾವುದೇ ಒಂದು ಜಿಲ್ಲೆಯಲ್ಲಿ ನೇಮಕಾತಿ ಹೊಂದಿದ ಹಾಗೂ ಅದೇ ಜಿಲ್ಲೆಯಲ್ಲಿ ಏಳು ವರ್ಷಗಳ ಕಾಲ ಸೇವೆ ಸಲ್ಲಿಸಿದ ಯಾವುದೇ ಸಿಬ್ಬಂದಿ, ಇತರೆ ಜಿಲ್ಲೆಗಳು ಅಥವಾ ತಮ್ಮ ಸ್ವಂತ ಜಿಲ್ಲೆಗೆ ವರ್ಗಾವಣೆ ಹೊಂದಲು ಅರ್ಹತೆ ಪಡೆಯಲಿದ್ದಾರೆ, ಹಾಗೂ ಕೆಲವು ಷರತ್ತುಗಳು ಅನ್ವಯವಾಗುತ್ತವೆ ಎಂದರು.

- Advertisement -

ಅದೇ ರೀತಿಯಾಗಿ ಪೊಲೀಸ್ ಇಲಾಖೆಗೆ ನೇಮಕವಾದ ಹಾಗೂ ಕನಿಷ್ಠ ಮೂರು ವರ್ಷಗಳ ಸೇವೆ ಸಲ್ಲಿಸಿದ ಮಾಜಿ ಯೋಧರು, ಸಹ ಬೇರೆ ಜಿಲ್ಲೆಗೆ ವರ್ಗಾವಣೆ ಕೊರಲೂ, ಇಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮತಿಸಲಾಗಿದೆ ಎಂದು ಆರಗ ಜ್ಞಾನೇಂದ್ರ ತಿಳಿಸಿದರು.

Join Whatsapp
Exit mobile version