ಪರಪ್ಪನ ಅಗ್ರಹಾರ ಕಾರಗೃಹ ಅವ್ಯವಹಾರಗಳ ಬಗ್ಗೆ ತನಿಖೆ: ಗೃಹ ಸಚಿವ ಅರಗ ಜ್ಞಾನೇಂದ್ರ

Prasthutha|

ಶಿವಮೊಗ್ಗ: ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆಯುತ್ತಿರುವ ಅವ್ಯವಹಾರ ಗಳ ಕುರಿತು ಮಾಧ್ಯಮಗಳಲ್ಲಿ ವರದಿಯಾಗಿದೆ. ನಾನು ಈ ಹಿಂದೆ ಕಾರಾಗೃಹಕ್ಕೂ ಭೇಟಿ ನೀಡಿದ್ದೆ ಹಾಗೂ ಅಲ್ಲಿನ ಸಿಬ್ಬಂದಿ ಹಾಗೂ ಕೈದಿಗಳ ಜೊತೆಗೂ ಸಂವಾದ ನಡೆಸಿದ್ದೆ. ಕಾರಾಗೃಹಗಳು ಅಪರಾಧ ಕೃತ್ಯ ನಡೆಸುವ ಕೇಂದ್ರ ಸ್ಥಾನಗಳು ಆಗಬಾರದು. ಈ ನಿಟ್ಟಿನಲ್ಲಿ ಯಾವುದೇ ರೀತಿಯ ಲೋಪಗಳಾಗುತ್ತಿದ್ದರೆ ಅದರ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳಲು ನಿರ್ದೇಶನ ನೀಡಿದ್ದೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

- Advertisement -

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಆದೇಶ ನೀಡಿದ್ದೇನೆ. ವರದಿ ಸಲ್ಲಿಕೆ ನಂತರ ಸೂಕ್ತ ಕ್ರಮ ವಹಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Join Whatsapp