Home ಟಾಪ್ ಸುದ್ದಿಗಳು ಪರಪ್ಪನ ಅಗ್ರಹಾರ ಕಾರಗೃಹ ಅವ್ಯವಹಾರಗಳ ಬಗ್ಗೆ ತನಿಖೆ: ಗೃಹ ಸಚಿವ ಅರಗ ಜ್ಞಾನೇಂದ್ರ

ಪರಪ್ಪನ ಅಗ್ರಹಾರ ಕಾರಗೃಹ ಅವ್ಯವಹಾರಗಳ ಬಗ್ಗೆ ತನಿಖೆ: ಗೃಹ ಸಚಿವ ಅರಗ ಜ್ಞಾನೇಂದ್ರ

ಶಿವಮೊಗ್ಗ: ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆಯುತ್ತಿರುವ ಅವ್ಯವಹಾರ ಗಳ ಕುರಿತು ಮಾಧ್ಯಮಗಳಲ್ಲಿ ವರದಿಯಾಗಿದೆ. ನಾನು ಈ ಹಿಂದೆ ಕಾರಾಗೃಹಕ್ಕೂ ಭೇಟಿ ನೀಡಿದ್ದೆ ಹಾಗೂ ಅಲ್ಲಿನ ಸಿಬ್ಬಂದಿ ಹಾಗೂ ಕೈದಿಗಳ ಜೊತೆಗೂ ಸಂವಾದ ನಡೆಸಿದ್ದೆ. ಕಾರಾಗೃಹಗಳು ಅಪರಾಧ ಕೃತ್ಯ ನಡೆಸುವ ಕೇಂದ್ರ ಸ್ಥಾನಗಳು ಆಗಬಾರದು. ಈ ನಿಟ್ಟಿನಲ್ಲಿ ಯಾವುದೇ ರೀತಿಯ ಲೋಪಗಳಾಗುತ್ತಿದ್ದರೆ ಅದರ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳಲು ನಿರ್ದೇಶನ ನೀಡಿದ್ದೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಆದೇಶ ನೀಡಿದ್ದೇನೆ. ವರದಿ ಸಲ್ಲಿಕೆ ನಂತರ ಸೂಕ್ತ ಕ್ರಮ ವಹಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Join Whatsapp
Exit mobile version