ರಾಮ ಮಂದಿರ ಉದ್ಘಾಟನೆಗೆ ಆಹ್ವಾನ: ಸ್ಪಷ್ಟನೆ ನೀಡಿದ ಸಿಪಿಐ(ಎಂ)

Prasthutha|

ನವದೆಹಲಿ: ರಾಮ ಮಂದಿರ ಉದ್ಘಾಟನೆಗೆ ಕಮ್ಯೂನಿಸ್ಟ್ ನಾಯಕರಿಗೆ ಆಮಂತ್ರ ದೊರೆತ ಬೆನ್ನಲ್ಲೇ ಪಕ್ಷದ ನಾಯಕಿ ಬೃಂದಾ ಕಾರಟ್ ಸ್ಪಷ್ಟನೆ ನೀಡಿದ್ದಾರೆ. ನಮ್ಮ ಯಾವುದೇ ನಾಯಕರು ರಾಮ ಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

- Advertisement -

ಜನವರಿ 22 ರಂದು ಆಯೋಧ್ಯೆಯಲ್ಲಿನ ರಾಮ ಮಂದಿರದಲ್ಲಿ ನಡೆಯುವ ಪ್ರಾಣ ಪ್ರತಿಷ್ಠೆಯಲ್ಲಿ CPI(M) ಪಕ್ಷ ಪಾಲ್ಗೊಳ್ಳುವುದಿಲ್ಲ. ಪಕ್ಷ ಇತರರ ಧಾರ್ಮಿಕ ನಂಬಿಕೆಯನ್ನು ಗೌರವಿಸುತ್ತದೆ. ಆದರೆ ರಾಮ ಮಂದಿರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ. ಬಿಜೆಪಿ ರಾಜಕೀಯದಿಂದ ನಾವು ತೆರಳುತ್ತಿಲ್ಲ ಎಂದು ಬೃಂದಾ ಕಾರಟ್ ಹೇಳಿದ್ದಾರೆ.

ರಾಮ ಮಂದಿರ ವಿಚಾರ ಮುಂದಿಟ್ಟುಕೊಂಡು ಬಿಜೆಪಿ ರಾಜಕೀಯ ಮಾಡುತ್ತಿದೆ. ಧಾರ್ಮಿಕ ಭಾವನೆಯನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ ಎಂದ ಸಿಪಿಐಎಂ ನಾಯಕಿ, ಧಾರ್ಮಿಕ ನಂಬಿಕೆಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.

Join Whatsapp