ಗಣರಾಜ್ಯೋತ್ಸವದ ಅಂಗವಾಗ ಇಖ್ರಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸಮಾಜ ಸೇವಕರಿಗೆ ಸನ್ಮಾನ

Prasthutha|

ಉಳ್ಳಾಲ: 73 ನೇ ಗಣರಾಜ್ಯೋತ್ಸವದ ಅಂಗವಾಗಿ ಇಖ್ರಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಳ್ಳಾಲಹಳೆಕೋಟೆ ಸಯ್ಯದ್ ಮದನಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಾಜ ಸೇವಕರಾದ ಆರ್.ಕೆ.ಸಿ ಅಝೀಝ್ ಮದನಿ ನಗರ ಮತ್ತು ಇಮ್ತಿಯಾಝ್ ಕೋಟೆಪುರ ಇವರನ್ನು ಶಿಕ್ಷಕರ ಸಮ್ಮುಖದಲ್ಲಿ ಶಾಲು ಹೊದಿಸಿ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.

- Advertisement -

ಸಮಾರಂಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಕೆ.ಎಂ.ಕೆ ಮಂಜನಾಡಿ, ಶಾಲಾ ಸಂಚಾಲಕ ಇಸ್ಮಾಯಿಲ್ ಹಾಜಬ್ಬ, ಇಖ್ರಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಮಹಮ್ಮದ್ ಯು.ಬಿ, ಎಸ್.ಡಿ.ಪಿ.ಐ ಅಧ್ಯಕ್ಷರಾದ ಸುಹೇಲ್ ಉಳ್ಳಾಲ್, ಉಳ್ಳಾಲ ದರ್ಗಾ ಕಾರ್ಯದರ್ಶಿ ಮಹಮ್ಮದ್ ತ್ವಾಹಾ ಹಾಜಿ, ಇಖ್ರಾ ಚಾರಿಟೇಬಲ್ ಟ್ರಸ್ಟ್ ಕಾರ್ಯದರ್ಶಿ ಫಾರೂಕ್ ಹಳೇಕೋಟೆ, ಮುಸ್ಲಿಂ ಒಕ್ಕೂಟದ ಇಸ್ಮಾಯಿಲ್ ಉಳ್ಳಾಲ ಮತ್ತಿತರರು ಉಪಸ್ಥಿತರಿದ್ದರು.

Join Whatsapp