ಅಂಬೇಡ್ಕರ್ ನಿಗಮದ ಗಂಗಾ ಕಲ್ಯಾಣ ಯೋಜನೆಯಲ್ಲಿ 450 ಕೋಟಿ ಅಕ್ರಮ: ಸಿಐಡಿ ತನಿಖೆಗೆ ಆದೇಶ

Prasthutha|

ಬೆಳಗಾವಿ: 2019-20 ಹಾಗೂ 21ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯಡಿ ಆಹ್ವಾನಿಸಿರುವ ಟೆಂಡರ್’ಗಳಲ್ಲಿ ನಡೆದಿರುವ 450 ಕೋಟಿ ರೂ. ಹಗರಣದ ಬಗ್ಗೆ  ಸಿಐಡಿ ತನಿಖೆ ನಡೆಸಲು ಸರ್ಕಾರ ಆದೇಶಿಸಿದೆ.

- Advertisement -

ಸಮಾಜ ಕಲ್ಯಾಣ ಇಲಾಖೆಯ  ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ 2019-20 ಹಾಗೂ 2020-21ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯಡಿ  ಆಹ್ವಾನಿಸಿರುವ ಟೆಂಡರ್ ಪ್ರಕ್ರಿಯೆಯಲ್ಲಿ ಆಯ್ಕೆಯಾಗಿರುವ ಬಿಡ್ ದಾರರು ಅಕ್ರಮ ಹಾಗೂ ನಕಲಿ ದಾಖಲಾತಿಗಳನ್ನು ಸಲ್ಲಿಸಿ ನಿಯಮ ಉಲ್ಲಂಘಿಸಿ ಯಶಸ್ವಿ ಬಿಡ್ ದಾರರಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಇಲಾಖೆಯ ಸುಮಾರು 450 ಕೋಟಿ ರೂ. ಅನುದಾನ ದುರುಪಯೋಗವಾಗಿದೆ ಎಂಬ ಆರೋಪ ಕೇಳಿಬಂದಿತ್ತು.

ಈ ಆರೋಪದಲ್ಲಿ ಕೆಲವು ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಈ ಅವ್ಯವಹಾರದ ಬಗ್ಗೆ ಸಿಐಡಿ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಬೊಮ್ಮಾಯಿ ಆದೇಶಿಸಿದ್ದರು. ಅದರಂತೆ ಸಿಐಡಿ ತನಿಖೆಗೆ ಆದೇಶಿಸಿ ಸಮಾಜ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಮೇಜರ್ ಮಣಿವಣ್ಣನ್ ಆದೇಶ ಹೊರಡಿಸಿದ್ದಾರೆ.

Join Whatsapp