ಕುಮಾರಸ್ವಾಮಿ ಆದಾಯ ತೆರಿಗೆ ಇಲಾಖೆ ಪ್ರತಿನಿಧಿಯಾಗಿದ್ದಾರಾ?: ಡಿಸಿಎಂ ತಿರುಗೇಟು

Prasthutha|

ಬೆಂಗಳೂರುಐಟಿ ದಾಳಿ ವಿಚಾರವಾಗಿ ುಪಮುಖ್ಯಮಂತ್ರಿ ತಮ್ಮ ಹೆಸರು ತಳುಕು ಹಾಕಿ ಟೀಕೆ ಮಾಡುತ್ತಿರುವ ಕುಮಾರಸ್ವಾಮಿಯ ವಿರುದ್ಧ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೆಂಡಾಮಂಡಲವಾಗಿದ್ಧಾರೆ. ಅವರೇನು ಆದಾಯ ತೆರಿಗೆ ಇಲಾಖೆ ಪ್ರತಿನಿಧಿಯಾಗಿದ್ದಾರಾ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.  ಕುಮಾರಸ್ವಾಮಿ  ಆದಾಯ ತೆರಿಗೆ ಇಲಾಖೆಯ ಪ್ರತಿನಿಧಿಯೇನೂ ಅಲ್ಲ. ಆದರೂ ಮಾತನಾಡುತ್ತಿದ್ದಾರೆ‌ ಎಂದು ಶಿವಕುಮಾರ್ ತಿರುಗೇಟು ನೀಡಿದ್ದಾರೆ.

- Advertisement -


ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು ಐಟಿ ದಾಳಿ ಸಂಬಂಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಾಡುತ್ತಿರುವ ಆರೋಪದ ಬಗ್ಗೆ ಡಿಕೆಶಿಯವರನ್ನು ಕೇಳಿದ್ದಾರೆ. ಅದಕ್ಕೆ ಕೆಂಡಾಮಂಡಲವಾದ ಅವರು,  ಮೇಲಿನಂತೆ ಪ್ರಶ್ನಿಸಿದ್ದರಲ್ಲದೆ,  ಯಾರು ಏನು ಆರೋಪ ಮಾಡುತ್ತಾರೋ ಮಾಡಲಿ, ಆದಾಯ ಇಲಾಖೆ ಅಧಿಕಾರಿಗಳ ದಾಳಿ, ತನಿಖೆ ಮುಗಿದ ನಂತರ ತಮ್ಮ ಹೇಳಿಕೆಯನ್ನು ಪ್ರಕಟಿಸಲಿ. ಆನಂತರ ನಾನು ಪ್ರತಿಕ್ರಿಯೆ ನೀಡುತ್ತೇನೆ ಎಂದರು.



Join Whatsapp