ಬೊಮ್ಮಾಯಿ ಸರ್ಕಾರ ಕರ್ನಾಟಕವನ್ನು ತಾಲಿಬಾನ್ ಮಾಡಲು ಹೊರಟಿದೆಯೇ ? ಬಿಜೆಪಿಗೆ ಕಾಂಗ್ರೆಸ್ ಪ್ರಶ್ನೆ

Prasthutha|

ಬೆಂಗಳೂರು: ನಮಗೆ ಶೂಟ್ ಮಾಡಿದರೆ ತಮಗೂ ಶೂಟ್ ಮಾಡುವುದಾಗಿ ವಿವಾದತ್ಮಕ ಹೇಳಿಕ ನೀಡಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಅವರ ಹೇಳಿಕೆಯ ವಿರುದ್ಧ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದು, ಕಾಂಗ್ರೆಸ್ ಕಟುವಾಗಿ ಖಂಡಿಸಿದೆ.

- Advertisement -

ಬೊಮ್ಮಾಯಿ ಸರ್ಕಾರ ಕರ್ನಾಟಕವನ್ನು ತಾಲಿಬಾನ್ ಮಾಡಲು ಹೊರಟಿದಿಯೇ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಪ್ರಿಯಾಂಕ್‌ ಖರ್ಗೆ ಅವರಿಗೆ ಗುಂಡು ಹೊಡೆಯುತ್ತೇವೆ ಎಂದು ಬೆದರಿಕೆ ಹಾಕಿದವರ ವಿರುದ್ಧ ಕ್ರಮ ಕೈಗೊಳ್ಳದೆ, ತಿರುಗಾಡಲು ಬಿಟ್ಟಿದೆ ಸರ್ಕಾರ. ಬಸವರಾಜ ಬೊಮ್ಮಾಯಿ ಅವರೇ, ಕರ್ನಾಟಕವನ್ನು ಉತ್ತರ ಪ್ರದೇಶದಂತೆ ಮಾಡಲು ಹೊರಟಿದ್ದೀರಾ? ಅಥವಾ ತಾಲಿಬಾನ್ ಮಾಡಲು ಹೊರಟಿದ್ದೀರಾ? ಅಥವಾ ಇದು ಪಿಎಸ್‌ಐ ಹಗರಣ ಬಯಲು ಮಾಡಿದಕ್ಕೆ ಬಿಜೆಪಿ ಸರ್ಕಾರದ ಪ್ರಾಯೋಜಿತ ಬೆದರಿಕೆಯೇ?’ ಎಂದು ಪ್ರಶ್ನೆ ಮಾಡಿದೆ.

- Advertisement -

‘ನೀವು ಎಕೆ–47ನಿಂದ ಶೂಟ್ ಮಾಡಿದರೂ ನಾನು ಸಾಯಲು ಸಿದ್ಧ. ತಮಗೂ ಶೂಟ್ ಮಾಡಲು ಸಿದ್ಧ’ ಎಂದು ಕಾಂಗ್ರೆಸ್‌ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಬಿಜೆಪಿ ಮುಖಂಡ ಮಣಿಕಂಠ ಠಾರೋಡ ಎಚ್ಚರಿಕೆ ನೀಡಿದ್ದರು.

Join Whatsapp