ಚಂದ್ರಯಾನ–3 ಯಶಸ್ಸಿನ ಕೀರ್ತಿ ನಮ್ಮ ವಿಜ್ಞಾನಿಗಳಿಗೋ ಅಥವಾ ‘ಲಾರ್ಡ್’ ತಿರುಪತಿಗೋ?: ನಟ ಚೇತನ್

Prasthutha|

ಬೆಂಗಳೂರು: ಚಂದ್ರಯಾನ–3 ಯೋಜನೆಯ ಯಶಸ್ಸಿನ ಕೀರ್ತಿ ಯಾರಿಗೆ ಸಲ್ಲುತ್ತದೆ. ನಮ್ಮ ವಿಜ್ಞಾನಿಗಳಿಗೋ ಅಥವಾ ‘ಲಾರ್ಡ್’ ತಿರುಪತಿಗೋ? ಎಂದು ನಟ ಚೇತನ್ ಅಹಿಂಸಾ ಪ್ರಶ್ನಿಸಿದ್ದಾರೆ.

- Advertisement -


ಈ ಸಂಬಂಧ ಟ್ವೀಟ್ ಮಾಡಿರುವ ಅವರು, ‘ಚಂದ್ರಯಾನ–3 ಚಂದ್ರನ ಮೇಲೆ ಇಳಿಯುವ ಐತಿಹಾಸಿಕ ಕ್ಷಣವನ್ನು ನೋಡಲು ನನಗೆ ಸಂತೋಷವಾಗಿದೆ. ಈ ಯಶಸ್ಸಿನ ಕೀರ್ತಿ(ಗುರುತು) ಯಾರಿಗೆ ಸಲ್ಲುತ್ತದೆ: ನಮ್ಮ ವಿಜ್ಞಾನಿಗಳಿಗೋ ಅಥವಾ ‘ಲಾರ್ಡ್‘ ತಿರುಪತಿಗೋ?’ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ.


ಭಾರತೀಯ ಬಾಹ್ಯಾಕಾಶ ಸಂಸ್ಥೆ( ಇಸ್ರೊ) ಚಂದ್ರಯಾನ–3 ನೌಕೆಯನ್ನು ಜುಲೈ 14ರಂದು ಉಡಾವಣೆ ಮಾಡಲಾಗಿತ್ತು. ಲ್ಯಾಂಡ್ ರೋವರ್ ಚಂದ್ರನ ಮೇಲೆ ಬುಧವಾರ (ಆಗಸ್ಟ್ 23 ) ಯಶಸ್ವಿಯಾಗಿ ಇಳಿದಿದೆ.

- Advertisement -



Join Whatsapp