ಚೀನಾ ಸೈನಿಕರ ಉಪಟಳ: ಸರ್ಕಾರ ತನ್ನ ರಕ್ಷಣಾ ವೈಫಲ್ಯ ಮುಚ್ಚಿಕೊಳ್ಳಲು ಚರ್ಚೆಗೆ ಹೆದರುತ್ತಿದೆಯೇ?-ದಿನೇಶ್ ಗುಂಡೂರಾವ್

Prasthutha|

ಬೆಂಗಳೂರು: ಚೀನಾ ಜೊತೆಗಿನ ಗಡಿ ವಿವಾದಕ್ಕೆ ಸಂಬಂಧಪಟ್ಟಂತೆ ಕೇಂದ್ರ ಯಾವುದೇ ನಿರ್ಧಾರ ತೆಗೆದುಕೊಂಡರೂ ನಮ್ಮ ಬೆಂಬಲವಿದೆ. ಈ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ. ಅದೇ ರೀತಿ ಸರ್ಕಾರವೂ ಕೂಡ ಪ್ರಾಮಾಣಿಕವಾಗಿ ನಡೆದುಕೊಳ್ಳಬೇಕು. ಪ್ರಧಾನಿ ಮೋದಿ ಕೆಲ ದಿನಗಳ ಹಿಂದೆ ಗಡಿಯಲ್ಲಿ ಎಲ್ಲಾ ಸಹಜವಾಗಿದೆ ಎಂದಿದ್ದರು. ಆದರೆ ಗಡಿಯಲ್ಲಿ ಪರಿಸ್ಥಿತಿ ಸಹಜವಾಗಿದೆಯೇ? ಎಂದು ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.

- Advertisement -

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಚೀನಾದ ಜೊತೆಗಿನ ಗಡಿ ವಿವಾದ ದೇಶದ ರಕ್ಷಣೆಗೆ ಸಂಬಂಧಪಟ್ಟಿದ್ದು. ಇದು ಅತ್ಯಂತ ಗಂಭೀರವಾದ ವಿಚಾರ. ಆದರೆ ಸರ್ಕಾರ ಗಡಿ ರಕ್ಷಣೆಗೆ ತೆಗೆದುಕೊಂಡ ಕ್ರಮಗಳ ಬಗ್ಗೆ ಸಂಸತ್ತಿನಲ್ಲಿ ಚರ್ಚೆಗೆ ಸಿದ್ಧವಿಲ್ಲ. ಗಡಿಯಲ್ಲಿ ಏನಾಗುತ್ತಿದೆ ಎಂದು ಸದನಕ್ಕೆ ಗೊತ್ತಾಗಬೇಕಲ್ಲವೆ? ಸರ್ಕಾರ ತನ್ನ ರಕ್ಷಣಾ ವೈಫಲ್ಯ ಮುಚ್ಚಿಕೊಳ್ಳಲು ಚರ್ಚೆಗೆ ಹೆದರುತ್ತಿದೆಯೇ?

Join Whatsapp