ನೀವು ಜೇಬೋಳಗೆ ಇಳಿಸಿಕೊಳ್ಳುತ್ತಿದ್ದ ಪೆನ್ ಡ್ರೈವ್‌ ರಹಸ್ಯ ಈಗ ಹೊರಬಂದಿದೆಯೇ: ಕುಮಾರಸ್ವಾಮಿಗೆ ಕೇಳಿದ ಕಾಂಗ್ರೆಸ್

Prasthutha|

ಬೆಂಗಳೂರು: ರಾಜ್ಯದಲ್ಲಿ ಸಂಚಲನ ಸೃಷ್ಟಿಸುತ್ತಿರುವ ‘ಹಾಸನ ಪೆನ್ ಡ್ರೈವ್’ ವಿಚಾರವಾಗಿ ಮಾಜಿ ಸಿಎಂ ಕುಮಾರಸ್ವಾಮಿಗೆ, ‘ಕುಮಾರಣ್ಣ.. ದಾರಿ ತಪ್ಪಿದವರು ಯಾರಣ್ಣ’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

- Advertisement -

ಕಾಂಗ್ರೆಸ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಕುಮಾರಸ್ವಾಮಿಯವರೇ, ನೀವು ತೋರಿಸಿ, ತೋರಿಸಿ ಜೇಬೋಳಗೆ ಇಳಿಸಿಕೊಳ್ಳುತ್ತಿದ್ದ ಪೆನ್ ಡ್ರೈವ್‌ನಲ್ಲಿನ ರಹಸ್ಯ ಈಗ ಹೊರಬಂದಿದೆಯೇ ಎಂದು ಕೇಳಿದೆ.

ಹಾಸನದ ಬೀದಿ ಬೀದಿಗಳಲ್ಲಿ ಚೆಲ್ಲಾಡುತ್ತಿರುವ ಪೆನ್ ಡ್ರೈವ್ ನಿಮ್ಮದೇನಾ ಎಂದು ಕಾಂಗ್ರೆಸ್ ಹೆಚ್‌ಡಿಕೆಯನ್ನು ಪ್ರಶ್ನಿಸಿದೆ

- Advertisement -

ರಾಜ್ಯದ ಮಹಿಳೆಯರ ಬಗ್ಗೆ ನಾಲಿಗೆ ಹರಿಬಿಟ್ಟು ದಾರಿ ತಪ್ಪಿದ್ದಾರೆ ಎಂದಿದ್ದ ನೀವು ಯಾಕೆ ಈಗ ಗಾಢ ಮೌನ ವಹಿಸಿದ್ದೀರಿ? ದಾರಿ ತಪ್ಪಿ ನಡೆದವರು ಯಾರು ಎನ್ನುವ ಸಂಗತಿ ಬಟಾಬಯಲಾಗಿರುವಾಗ ರಾಜ್ಯದ ಜನರಿಗೆ ಮುಖ ತೋರಿಸಲಾಗುತ್ತಿಲ್ಲವೇ? ಎಂದು ಕಾಂಗ್ರೆಸ್ ಕುಟುಕಿದೆ.

ಈ ಸಂಬಂಧವಾಗಿ ಪ್ರಧಾನಿ‌ ಮೋದಿಗೂ ಪ್ರಶ್ನಿಸಿದ ಕಾಂಗ್ರೆಸ್, ಗೌರವದಿಂದ ಮಂಗಳಸೂತ್ರ ತೊಟ್ಟಿರುವ ಹೆಣ್ಣು ಮಕ್ಕಳ ಮಾನ ಮರ್ಯಾದೆ ಹರಾಜು ಮಾಡಿದ್ದು ಯಾರು ಎಂದು ಕಣ್ಬಿಟ್ಟು ನೋಡಿ ಮೋದಿಯವರೇ. ಹಾಸನ ಮೂಲದ ಬಿಜೆಪಿ ಬೆಂಬಲಿತ ಸಂಸದನಲ್ಲವೇ? ಇದು ಮಹಿಳೆಯರ ಮಂಗಳ ಸೂತ್ರದ ಪಾವಿತ್ರ್ಯತೆಗೆ ಕುತ್ತು ತಂದಿದ್ದು ಎಂದು ನಿಮಗೆ ಅನಿಸುವುದಿಲ್ಲವೇ ಎಂದು ಕೇಳಿದೆ.

Join Whatsapp