ಹರ್ಷ ಕೊಲೆ ಪ್ರಕರಣ: ಮುಸ್ಲಿಂ ಗೂಂಡಾಗಳಿಂದ ಹತ್ಯೆ ಎಂದು ಮತ್ತೆ ಪುನರುಚ್ಚರಿಸಿದ ಈಶ್ವರಪ್ಪ !

Prasthutha|

ಮಂಗಳೂರು: ಶಿವಮೊಗ್ಗದಲ್ಲಿ ನಡೆದಿದ್ದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಾತನಾಡುವ ಸಂದರ್ಭ ಕೆ ಎಸ್ ಈಶ್ವರಪ್ಪ ನಾಲಗೆ ಹರಿಯಬಿಟ್ಟಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಮುಸ್ಲಿಂ ಗೂಂಡಾಗಳಿಂದ ಹರ್ಷನ ಹತ್ಯೆಯಾಗಿದೆ ಎಂದು ಮತ್ತೆ ಪುನರುಚ್ಚರಿಸಿದ್ದಾರೆ.

- Advertisement -

ಹರ್ಷ ಕೊಲೆ ಪ್ರಕರಣದ ಕೊಲೆಗಡುಕರನ್ನು ಮುಸ್ಲಿಂ ಗೂಂಡಾಗಳು ಅಂತ ಕರಿಯದೆ ಒಳ್ಳೆಯವರು ಅಂತ ಕರೆಯಬೇಕಾ, ಆ ಕೊಲೆಗಡುಕರನ್ನು ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಏನಂತ ಕರೆಯುತ್ತಾರೆ ಎಂದು ಪ್ರಶ್ನಿಸಿದ್ದಾರೆ. ರಾಜ್ಯದಲ್ಲಿ ಶಾಂತಿ ಕಾಪಾಡಬೇಕು ಎನ್ನುವ ಉದ್ದೇಶ ಬಿಜೆಪಿಗಿದೆ. ಆದರೆ ಕಾಂಗ್ರೆಸ್ಸಿಗರು ಹಿಜಾಬ್ ಬಗ್ಗೆ ಅಥವಾ ಹರ್ಷ ಕೊಲೆ ಬಗ್ಗೆ ಮುಸಲ್ಮಾನರು ಸಂತೃಪ್ತಿ ಪಡುವ ಹಾಗೆ ಹೇಳಿಕೆಯನ್ನು ಕೊಡುತ್ತಿದ್ದಾರೆ ಎಂದು ಆರೋಪಿಸಿದರು.

ಕೋಮು ದ್ವೇಷಕ್ಕೆ ಪಿಎಫ್ಐ ಮತ್ತು ಎಸ್ಡಿಪಿಐ ಕಾರಣ ಎಂದು ಕಾಂಗ್ರೆಸ್ಸಿನ ಮುಸ್ಲಿಂ ಶಾಸಕರು ಹೇಳುತ್ತಾರೆ, ಆದರೆ ಸಿದ್ದರಾಮಯ್ಯ ಈ ಕೋಮು ದ್ವೇಷಕ್ಕೆ ಕಾರಣ ಆರೆಸ್ಸೆಸ್ ಮತ್ತು ಬಿಜೆಪಿ ಎಂದು ಹೇಳುತ್ತಾರೆ. ಈ ಎರಡು ಹೇಳಿಕೆಯಲ್ಲಿ ನಾವು ಯಾವುದನ್ನು ನಂಬಬೇಕು ಎಂದು ಪ್ರಶ್ನಿಸಿದ್ದಾರೆ. ಅವರ ಪಾಪವನ್ನ ನಮ್ಮ ಮೇಲೆ ಹೊರಿಸಲು ಯತ್ನಿಸುತ್ತಿದ್ದಾರೆ‌ ಎಂದು ಕಿಡಿಕಾರಿದರು.

Join Whatsapp