ಮೋಹನ್ ಭಾಗವತ್ ಸೇರಿದಂತೆ ಆರೆಸ್ಸೆಸ್ ಮುಖಂಡರನ್ನು ಭೇಟಿಯಾದ ಇಸ್ರೇಲ್ ಕಾನ್ಸುಲೇಟ್ ಜನರಲ್

Prasthutha|

ನಾಗ್ಪುರ: ವಿಜಯ ದಶಮಿ ಆಚರಣೆಯ ಹಿನ್ನೆಲೆಯಲ್ಲಿ ಇಸ್ರೇಲ್ ಕಾನ್ಸುಲೇಟ್ ಜನರಲ್ ಕೊಬ್ಬಿ ಶೋಷನಿ ಬಲಪಂಥೀಯ ಸಂಘಟನೆಯಾದ ಆರೆಸ್ಸೆಸ್ ನ ಪ್ರಧಾನ ಕಚೇರಿ ಭೇಟಿ ನೀಡಿ, ಆರ್ ಎಸ್ ಎಸ್ ಮುಖಂಡರೊಂದಿಗೆ ಚರ್ಚೆ ನಡೆಸಿದರು.

- Advertisement -

ಈ ಸಂದರ್ಭದಲ್ಲಿ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ, ಮಹಾರಾಷ್ಟ್ರ ಅಸೆಂಬ್ಲಿ ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ಅವರು ಕೊಬ್ಬಿ ಶೋಷನಿ ಅವರನ್ನು ಆರೆಸ್ಸೆಸ್ ನ ಸಾಂಪ್ರಾದಾಯಿಕ ಉಡುಗೆಯಲ್ಲಿ ಸ್ವಾಗತಿಸಿದರು.

ನಿನ್ನೆ ನಡೆದ ವಿಜಯದಶಮಿ ಕಾರ್ಯಕ್ರಮದಲ್ಲಿಯೂ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಜೊತೆ ಶೋಷನಿ ಭಾಗವಹಿಸಿದ್ದರು.

- Advertisement -

ಪ್ರಸಕ್ತ ಭೇಟಿಯ ಸಂದರ್ಭದಲ್ಲಿ ಇಸ್ರೇಲ್ ಮತ್ತು ಭಾರತದ ನಡುವಿನ ಇತಿಹಾಸ, ಸಂಸ್ಕೃತಿ, ಆರ್ಥಿಕತೆ ಮತ್ತು ಪಾಲುದಾರಿಕೆ ಕುರಿತು ಚರ್ಚಿಸಲಾಗಿದೆ ಎಂದು ಮುಂಬೈನ ಇಸ್ರೇಲ್ ಕಾನ್ಸುಲೇಟ್ ಜನರಲ್ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.

Join Whatsapp