ಕಮಿಷನರ್ ಮಾತು ಸುಳ್ಳು ಎಂದರೆ ಸರ್ಕಾರಕ್ಕೆ ಅಪಮಾನ: ಭಾಸ್ಕರ್ ರಾವ್

Prasthutha|

ಬೆಂಗಳೂರು: ‘ಬೆಂಗಳೂರು ಪೊಲೀಸ್‌ ಕಮಿಷನರ್ ಸುಳ್ಳು ಹೇಳಿದ್ದಾರೆ’ ಎಂಬ ಬಿಜೆಪಿ ನಾಯಕರ ಮಾತು ಮುಖ್ಯಮಂತ್ರಿಗೆ ಮತ್ತು ಸರ್ಕಾರಕ್ಕೆ ಮಾಡಿದ ಅಪಮಾನ ಎಂದು ಎಎಪಿ ನಾಯಕ ಭಾಸ್ಕರ್‌ ರಾವ್‌ ಹೇಳಿದ್ದಾರೆ.

- Advertisement -

 ಈ ಕುರಿತು ಸೋಮವಾರ ಟ್ವೀಟ್ ಮಾಡಿದ ಅವರು, ‘ಬೆಂಗಳೂರು ಪೊಲೀಸ್ ಆಯುಕ್ತರು ಎಂದರೆ 1.5 ಕೋಟಿ ನಾಗರಿಕರ ರಕ್ಷಿಸುವ ಸಂಸ್ಥೆ. ರಾಜ್ಯದ ಆಡಳಿತಾರೂಢ ಪಕ್ಷ ಮತ್ತು ಅದರ ನಾಯಕರೊಬ್ಬರು ಮಾಧ್ಯಮಗಳಲ್ಲಿ ಆಯುಕ್ತರನ್ನು ‘ಸುಳ್ಳುಗಾರ’ ಎಂದು ಕರೆಯುವುದು ಮುಖ್ಯಮಂತ್ರಿ ಮತ್ತು ಸರ್ಕಾರವನ್ನು ಅವಮಾನಿಸಿದಂತೆ. ಉತ್ತಮ ಆಡಳಿತವು ಮೇಲುಗೈ ಸಾಧಿಸುತ್ತದೆ ಎಂದು ನಾನು ಭಾವಿಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

ಉರ್ದು ಮಾತನಾಡಲಿಲ್ಲ ಎಂಬ ಕಾರಣಕ್ಕೆ ಜೆ.ಜೆ. ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಚಂದ್ರಶೇಖರ ಎಂಬ ಯುವಕನ ಕೊಲೆ ನಡೆದಿತ್ತು ಎಂದು ಗೃಹ ಸಚಿವರು ನೀಡಿದ್ದ ಹೇಳಿಕೆ ಸತ್ಯ. ಬೈಕ್‌ ಗಳು ತಗುಲಿದ ವಿಚಾರಕ್ಕೆ ಗಲಾಟೆಯಾಗಿ ಕೃತ್ಯ ನಡೆದಿದೆ ಎಂದು ಪೊಲೀಸ್ ಕಮಿಷನರ್ ಹೇಳಿರುವುದು ಸುಳ್ಳು ಎಂದು ಬಿಜೆಪಿ ನಾಯಕ ಎನ್‌. ರವಿ ಕುಮಾರ್ ಇತ್ತೀಚೆಗೆ ಹೇಳಿದ್ದರು.



Join Whatsapp