ದೇಶದಲ್ಲಿ ಜಾತ್ಯತೀತ ಪಕ್ಷಗಳು ಒಗ್ಗೂಡುವುದು ಅನಿವಾರ್ಯ: ಎಚ್. ಡಿ. ದೇವೇಗೌಡ

Prasthutha|

ಬೆಂಗಳೂರು: ದೇಶದಲ್ಲಿ ಜಾತ್ಯತೀತ ಪಕ್ಷಗಳು ಒಗ್ಗೂಡುವುದು ಅನಿವಾರ್ಯ. ಈ ನಿಟ್ಟಿನಲ್ಲಿ ಚಿಂತನೆ ನಡೆಯಬೇಕು ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಜೆಪಿ ಭವನದ ಜೆಡಿಎಸ್ ಕಛೇರಿಯಲ್ಲಿ ಸುದ್ದಿ ಗೋಷ್ಠಿಯನ್ನುದ್ದೇಷಿಸಿ ಮಾತನಾಡಿದ ಅವರು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವು ಯಾರೊಂದಿಗೂ ಹೊಂದಾಣಿಕೆ ಮಾಡಿಕೊಳ್ಳದೆ ಕಾಂಗ್ರೆಸ್ ಮತ್ತು ಬಿಜೆಪಿ ವಿರುದ್ಧ ಹೋರಾಟ ನಡೆಸಲಿದೆ ಎಂದು ಸ್ಪಷ್ಟಪಡಿಸಿದರು.

- Advertisement -


ಪಂಚರಾಜ್ಯ ಚುನಾವಣೆಯ ಫಲಿತಾಂಶ ಬಿಜೆಪಿ ಪರ ಬಂದಿದೆ. ಕೇಂದ್ರದಲ್ಲಿ ಮನಮೋಹನ್ ಸಿಂಗ್ ಬಳಿಕ ಬಿಜೆಪಿ ಅಧಿಕಾರಕ್ಕೆ ಬಂತು. ಆದರೆ ಇಲ್ಲಿಯವರೆಗೆ ಬಿಜೆಪಿಯನ್ನು ಹಿಂದಿಕ್ಕಲು ಕಾಂಗ್ರೆಸ್ಸಿಗೆ ಸಾಧ್ಯವಾಗಿಲ್ಲ. ಕಾಂಗ್ರೆಸ್ ಬಲಹೀನವಾಗಿದೆ. ಕೆಲವೇ ರಾಜ್ಯಗಳಿಗೆ ಸೀಮಿತವಾದ ಪ್ರಾದೇಶಿಕ ಪಕ್ಷದಂತಾಗಿದೆ ಎನ್ನುವುದು ವಾಸ್ತವಾಂಶ ಎಂದು ಹೇಳಿದರು.


ಪ್ರಧಾನಿ ನರೇಂದ್ರ ಮೋದಿ ಚುನಾವಣೆಯನ್ನು ನಿಷ್ಠೆಯಿಂದ ಮಾಡುತ್ತಿರೆ, ನಾಲ್ಕು ದಿಕ್ಕಿನಲ್ಲಿ ಪಕ್ಷ ಅಧಿಕಾರಕ್ಕೆ ತರಲು ಪ್ರಯತ್ನ ಮಾಡ್ತಿದ್ದಾರೆ. ಈ ಭಾವನೆ ನಮ್ಮಲ್ಲೂ ಬರಬೇಕು, ಅದಕ್ಕಾಗಿ 20ನೇ ತಾರೀಕು ಬೆಂಗಳೂರಿನಲ್ಲೇ ಸಮಾವೇಶ ಮಾಡುತ್ತೇವೆ ಎಂದರು.

- Advertisement -


ಬಿಜೆಪಿ, ಜೆಡಿಎಸ್ ಏನು ಮಾಡಿದೆ ಎಂದು ಸಿದ್ದರಾಮಯ್ಯ ಹೇಳುತ್ತಿದ್ದರು. ಕಾವೇರಿಯನ್ನು ನೀವೇ ಉಳಿಸಿಕೊಡಬೇಕು ಎಂದು ನನ್ನ ಮನೆಗೆ ಬಂದಿದ್ದರು, ಈಗ ಕಾವೇರಿ ಕೊಳ್ಳದಲ್ಲಿ ನೀರು ತಂದೇ ಬಿಟ್ವೆವು ಎಂದು ಹೇಳಿಕೊಳ್ಳುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಹೋರಾಟದ ಕಾರ್ಯಕ್ರಮ ರೂಪಿಸುತ್ತೇವೆ. ಎರಡೆರಡು ಜಿಲ್ಲೆಗೆ ಒಂದು ಸಭೆ ಮಾಡುತ್ತೇವೆ , ಈ ಪಕ್ಷ ಉಳಿಸುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.


ಬಿಜೆಪಿ ಬಜೆಟ್ ನಲ್ಲಿ ಕೃಷ್ಣಾ ಮೇಲ್ದಂಡೆ ಐದು ಸಾವಿರ ಕೋಟಿ ರೂ. ಇಟ್ಟಿದ್ದಾರೆ, ಇದು ಯಾವ ಖುಷಿಗೆ ಎಂದು ಪ್ರಶ್ನಿಸಿದ್ದಾರೆ. ನನ್ನ ಜಿಲ್ಲೆಯ ಒಂದು ಕುಡಿಯುವ ನೀರಿನ ಯೋಜನೆಗೆ ಮೂರು ಸಾವಿರ ಕೋಟಿ ಇಟ್ಟಿದ್ದಾರೆ. ಅದರ ಯೋಜನಾ ವೆಚ್ಚ 8 ಸಾವಿರ ಕೋಟಿ ಇದೆ ! ಮೂರು ಸಾವಿರ ಕೋಟಿಯಲ್ಲಿ ಏನನ್ನು ಮಾಡಲು ಸಾಧ್ಯ, ನಾನು ಪ್ರಧಾನಿ ಆಗಿದ್ದಾಗ ಕಾವೇರಿ ಬೇಸಿನ್ ಗೆ ಅನುದಾನ ಕೊಟ್ಟಿದ್ದೆ ಎಂದು ಹೇಳಿದರು. ನೀರು ತರುತ್ತೇವೆ ಎಂದು ಎರಡು ತಿಂಗಳ ಹಿಂದೆ ಕಾಂಗ್ರೆಸ್ ಅವರು ಪಾದಯಾತ್ರೆ ಮಾಡಿದ್ರು , ನೀರಾವರಿ ಯೋಜನೆಗೆ ನಾನು ಏನೇನು ಕೊಟ್ಟಿದ್ದೀನಿ ಜನರ ಮುಂದೆ ಇದೆ. ಬೇರೆ ಬೇರೆ ಸರ್ಕಾರಗಳು ಏನು ಮಾಡಿದವು ಅನ್ನುವುದು ಈಗ ಬೇಡ, ರಾಮನಗರದಿಂದಲೇ ಪಾದಯಾತ್ರೆ ಹೊರಡಬೇಕು ಎಂದು ಕಾಂಗ್ರೆಸ್ ನಾಯಕರು ಹೇಳಿದರು ಎಂದು ದೇವೇಗೌಡ ತಿಳಿಸಿದರು.

Join Whatsapp