ಸಂಕಷ್ಟದ ಸಮಯದಲ್ಲಿ ಭಾರತ್ ಬಂದ್ ಗೆ ಕರೆ ನೀಡಿರುವುದು ಸರಿಯಲ್ಲ: ಮುಖ್ಯಮಂತ್ರಿ ಬೊಮ್ಮಾಯಿ

Prasthutha|

ಹುಬ್ಬಳ್ಳಿ: ಕೊರೋನಾ ಸಂಕಷ್ಟದಿಂದ ಈಗಷ್ಟೇ ಜನರು ಚೇತರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ರೈತ ಸಂಘಟನೆಗಳು ಭಾರತ್ ಬಂದ್‌ ಗೆ ಕರೆ ನೀಡಿರುವುದು ಒಳ್ಳೆಯ ನಿರ್ಧಾರವಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೋವಿಡ್‌ನಿಂದಾಗಿ ಎಲ್ಲ ಕ್ಷೇತ್ರಗಳ ಕಾರ್ಯಚಟುವಟಿಕೆಗಳು ಕುಂಠಿತಗೊಂಡಿದ್ದವು. ಸದ್ಯ ಕೋವಿಡ್ ಸೋಂಕು ಪ್ರಮಾಣ ಇಳಿಮುಖವಾಗುತ್ತಿದ್ದು, ಮಾರುಕಟ್ಟೆಯಲ್ಲಿ ವ್ಯಾಪಾರ, ವಹಿವಾಟು ಪುನರಾರಂಭವಾಗುತ್ತಿವೆ. ಈ ಸಂದರ್ಭದಲ್ಲಿ ಪ್ರತಿಭಟನೆ, ಬಂದ್‌ ನಡೆಸಿದರೆ ಜನಜೀವನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ರೈತ ಸಂಘಟನೆಗಳು ಬಂದ್‌ ನಡೆಸದೆ ಸಹಕಾರ ನೀಡಬೇಕು ಎಂದು ತಿಳಿಸಿದರು.

Join Whatsapp