Home ಟಾಪ್ ಸುದ್ದಿಗಳು ಯಾರ ಯಾರ ಮನಸ್ಸು, ನಾಲಿಗೆ ಮೇಲೆ ಏನಿದೆ ಎಂಬುದು ಈಗ ತಿಳಿಯುತ್ತಿದೆ: ಡಿಕೆಶಿ

ಯಾರ ಯಾರ ಮನಸ್ಸು, ನಾಲಿಗೆ ಮೇಲೆ ಏನಿದೆ ಎಂಬುದು ಈಗ ತಿಳಿಯುತ್ತಿದೆ: ಡಿಕೆಶಿ

ನವದೆಹಲಿ: ಸಿಬಿಐ ತನಿಖೆಗೆ ನೀಡಿದ್ದ ಆದೇಶ ಹಿಂಪಡೆದ ಸರ್ಕಾರದ ನಿರ್ಧಾರದ ಬಗ್ಗೆ ವಿರೋಧ ಪಕ್ಷಗಳ ನಾಯಕರ ಹೇಳಿಕೆ ಕುರಿತು ಕೇಳಲಾದ ಪ್ರಶ್ನೆಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಪ್ರತಿಕ್ರಿಯಿಸಿದ್ದಾರೆ‌. ತನಿಖೆಗೆ ಅನುಮತಿ ವಾಪಸ್‌ ಪಡೆದಿರುವ ಬೆಳವಣಿಗೆಯಿಂದ ಎಲ್ಲರ ಮನಸ್ಥಿತಿಯೂ ಅರ್ಥವಾಗುತ್ತಿದೆ ಎಂದಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು‌.

ನನ್ನ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ನಂತರ ಅನೇಕರ ಮಾತು ಹೊರಬರುತ್ತಿವೆ. ಈ ಮೂಲಕ ಯಾರ್ಯಾರ ಮನಸ್ಸು ಮತ್ತು ನಾಲಿಗೆ ಮೇಲೆ ಏನೇನಿದೆ ಎಂಬುದು ಈಗ ತಿಳಿಯುತ್ತಿದೆ ಎಂದು ಅವರು ಹೇಳಿದ್ದಾರೆ.

ಯಾರ್ಯಾರು ಗೆಳೆಯರು, ಅವರ ಭಾವನೆ ಏನಿದೆ ಎಂಬುದು ಈಗ ನನಗೆ ತಿಳಿಯುತ್ತಿದೆ. ಸಿಬಿಐ ತನಿಖೆಗೆ ಅನುಮತಿ ವಾಪಸ್ ಪಡೆದಿರುವ ಬಗ್ಗೆ ಈಗ ಮಾತನಾಡಲು ಹೋಗುವುದಿಲ್ಲ. ಮುಂದೆ ಅದರ ಬಗ್ಗೆ ಖಂಡಿತವಾಗಿಯೂ ಮಾತನಾಡುತ್ತೇನೆ. ಎಲ್ಲದಕ್ಕೂ ಉತ್ತರ ಕೊಡುತ್ತೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ತೆಲಂಗಾಣದಲ್ಲಿ ಕಾಂಗ್ರೆಸ್ ಪರ ಅಲೆ ಇದೆ ಎಂದು ಇದೇ ಸಂದರ್ಭ ಅವರು ಹೇಳಿದ್ದಾರೆ.

Join Whatsapp
Exit mobile version