ಕೊಲೆಗಡುಕರು, ರೇಪಿಸ್ಟ್’ಗಳು, ಭ್ರಷ್ಟಾಚಾರಿಗಳೆಲ್ಲ ಆರಾಮವಾಗಿ ಓಡಾಡಿಕೊಂಡಿರುವಾಗ ವ್ಯಂಗ್ಯದ ಮಾತಿಗೆ ರಾಹುಲ್ ಗಾಂಧಿ ಸದಸ್ಯತ್ವ ರದ್ದಾಗಿದೆಯಂದರೆ ಆಶ್ಚರ್ಯವಾಗುತ್ತಿದೆ: ಅಫ್ಸರ್ ಕೊಡ್ಲಿಪೇಟೆ

Prasthutha|

ಬೆಂಗಳೂರು: ಕೊಲೆಗಡುಕರು, ರೇಪಿಸ್ಟ್’ಗಳು, ಭ್ರಷ್ಟಾಚಾರಿಗಳೆಲ್ಲ ಆರಾಮವಾಗಿ ಓಡಾಡಿಕೊಂಡಿರುವಾಗ ವ್ಯಂಗ್ಯದ ಮಾತಿಗೆ ಕಾಂಗ್ರೆಸ್ ಪಕ್ಷದ ಉನ್ನತ ನಾಯಕ ರಾಹುಲ್ ಗಾಂಧಿಯ ಸಂಸತ್ ಸದಸ್ಯತ್ವ ರದ್ದಾಗಿದೆಯಂದರೆ ಆಶ್ಚರ್ಯವಾಗುತ್ತಿದೆ.! ಇಷ್ಟೊಂದು ಅಧಿಕಾರ ದರ್ಪ ಒಳ್ಳೆಯದಲ್ಲ. ಕಾಂಗ್ರೆಸ್ ಪಕ್ಷದ ಪ್ರಜಾಸತ್ತಾತ್ಮಕ ಪ್ರತಿರೋಧ ಸಹ ನೀರಸವಾಗಿರುವುದು ದೊಡ್ಡ ದುರಂತ ಎಂದು ಎಸ್’ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ರಾಹುಲ್ ಗಾಂಧಿಯನ್ನು ತುರ್ತಾಗಿ ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವುದು ನ್ಯಾಯಾಂಗ ಮತ್ತು ಶಾಸಕಾಂಗದ ನಿಯಮಾವಳಿಗೆ ವಿರುದ್ಧವಲ್ಲವೇ? ಯಾವುದೇ ವ್ಯಕ್ತಿಯನ್ನು ನ್ಯಾಯಾಲಯ ಶಿಕ್ಷೆಗೆ ಒಳಪಡಿಸಿದರೆ ಅವರಿಗೆ ಮೇಲ್ಮನವಿ ಸಲ್ಲಿಸಲು 30 ದಿನಗಳ ಕಾಲಾವಕಾಶ ಇರುತ್ತದೆ. ಕೇವಲ ಓಟಿಗಾಗಿ ದ್ವೇಷದ ರಾಜಕಾರಣ ಮಾಡುತ್ತಿರುವ ಬಿಜೆಪಿಯ ನಡೆ ಖಂಡನೀಯ ಎಂದು ಟೀಕಿಸಿದ್ದಾರೆ

Join Whatsapp