Home ಟಾಪ್ ಸುದ್ದಿಗಳು ಮುಖ್ಯಮಂತ್ರಿ ಬದಲಾವಣೆ ಮಾಡೋದು ಹೈಕಮಾಂಡ್ ಗೆ ಬಿಟ್ಟ ವಿಚಾರ: ಪರಮೇಶ್ವರ್

ಮುಖ್ಯಮಂತ್ರಿ ಬದಲಾವಣೆ ಮಾಡೋದು ಹೈಕಮಾಂಡ್ ಗೆ ಬಿಟ್ಟ ವಿಚಾರ: ಪರಮೇಶ್ವರ್

ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಮಾಡೋದು, ಮುಂದುವರೆಸೋದು ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.


ಲೋಕಸಭೆಯಲ್ಲಿ ಹೆಚ್ಚು ಸ್ಥಾನ ಗೆದ್ದರೆ 5 ವರ್ಷ ಸಿದ್ದರಾಮಯ್ಯ ಸಿಎಂ ಆಗಿ ಇರುತ್ತಾರೆ ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಲೋಕಸಭೆಯಲ್ಲಿ ಸಿದ್ದರಾಮಯ್ಯ ಒಬ್ಬರೇ ಅಲ್ಲ. ಕೆಪಿಸಿಸಿ ಅಧ್ಯಕ್ಷರು, ನಾವೆಲ್ಲರೂ ಇದ್ದೇವೆ. ನಾವೆಲ್ಲ ಸೇರಿ 28 ಕ್ಷೇತ್ರ ಗೆಲ್ಲಬೇಕು ಅಂತ ಪ್ರಯತ್ನ ಮಾಡ್ತೀವಿ. ಅಂತಿಮವಾಗಿ ಜನ ಹೇಗೆ ಸಹಕಾರ ಕೊಡ್ತಾರೆ, ಮತ ಹಾಕ್ತಾರೆ ಅನ್ನೋದು ಜನರಿಗೆ ಬಿಟ್ಟಿದ್ದು ಎಂದು ಹೇಳಿದ್ದಾರೆ.


ನಮಗೆ ವಿಶ್ವಾಸ ಇದೆ. ನಾವು ಕಾರ್ಯಕ್ರಮ ಕೊಟ್ಟಿದ್ದೇವೆ. ಗ್ಯಾರಂಟಿ ಅನುಷ್ಠಾನ ಮಾಡಿದ್ದೇವೆ. ಜನ ಸಮುದಾಯಕ್ಕೆ ಈ ಸರ್ಕಾರದ ಬಗ್ಗೆ ಒಳ್ಳೆಯ ಅಭಿಪ್ರಾಯ ಇದೆ. ಹಾಗಾಗಿ ನಾವು ಹೆಚ್ಚು ಸ್ಥಾನ ಗೆಲ್ಲಬೇಕು ಅಂತ ಹೇಳಿ ನಾವೆಲ್ಲ ಸಂಕಲ್ಪ ಮಾಡಿದ್ದೇವೆ. ಹೈಕಮಾಂಡ್ ಕೂಡಾ ನಮಗೆ ಇದನ್ನೇ ಹೇಳಿದೆ ಎಂದರು.

Join Whatsapp
Exit mobile version