ತೆರಿಗೆ ವಂಚನೆ| ಸಚಿವ ಶ್ರೀರಾಮುಲು ಒಡೆತನದ ಕಚೇರಿ ಮೇಲೆ ಐಟಿ ದಾಳಿ

Prasthutha|

ಬಳ್ಳಾರಿ: ಸಚಿವ ಬಿ.ಶ್ರೀರಾಮುಲು ಮತ್ತವರ ಅಳಿಯ ಮಾಜಿ ಶಾಸಕ ಟಿ.ಎಚ್‌. ಸುರೇಶ್‌ಬಾಬು ಒಡೆತನದ ಫ್ಯಾಕ್ಟರಿ ನಡೆಸುತ್ತಿರುವ ಉದ್ಯಮಿ ಕೈಲಾಸ್‌ ವ್ಯಾಸ್‌ ಅವರ ಮನೆ ಹಾಗೂ ಕಚೇರಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಶನಿವಾರ ದಾಳಿ ನಡೆಸಿದ್ದಾರೆ. ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ.

- Advertisement -

ಬೆಂಗಳೂರು ಹಾಗೂ ಚೆನ್ನೈ ಮೂಲದ ಹದಿನೈದು ಮಂದಿ ಅಧಿಕಾರಿಗಳ ತಂಡವು ಬೆಂಗಳೂರು, ಬಳ್ಳಾರಿ, ಕೊಪ್ಪಳದಲ್ಲಿರುವ ಕಂಪೆನಿಗಳ ಮೇಲೆ ದಾಳಿ ನಡೆಸಿದೆ ಎಂದು ವರದಿಯಾಗಿದೆ.

ಐಟಿ ಅಧಿಕಾರಿಗಳು ಬಳ್ಳಾರಿಯ ವಿದ್ಯಾನಗರದ “ರಾಗಾಸ್‌ ಪೋರ್ಟ್‌ ಅಪಾರ್ಟ್‌ ಮೆಂಟ್‌’ನ  ಎರಡು ಫ್ಲ್ಯಾಟ್‌ಗಳಲ್ಲೂ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

- Advertisement -

ಸಚಿವ ಶ್ರೀರಾಮುಲು, ಮಾಜಿ ಶಾಸಕ ಸುರೇಶ್‌ ಬಾಬು, ಲಾಡ್‌ ಕುಟುಂಬದ ಪ್ಲಾಂಟ್‌ಗಳನ್ನು ಪಾಲುದಾರ ಕೈಲಾಸ್‌ ವ್ಯಾಸ್‌ ಅವರು ಬಾಡಿಗೆ ಹಾಗೂ ಲೀಜ್‌ ಮೇಲೆ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ.

Join Whatsapp