ಮಂಗಳೂರು; ಕಾಂಗ್ರೆಸ್ ಮುಖಂಡನ ಮನೆ, ಕಚೇರಿ ಮೇಲೆ ಐಟಿ ದಾಳಿ

Prasthutha|

ಮಂಗಳೂರು: ಕಾಂಗ್ರೆಸ್ ಮುಖಂಡ ವಿವೇಕ್ ರಾಜ್ ಪೂಜಾರಿ ಅವರ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಿದ ಐಟಿ ಇಲಾಖೆಯ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

- Advertisement -

ಐಟಿ ಇಲಾಖೆಯ 8 ಮಂದಿ ಅಧಿಕಾರಿಗಳ ತಂಡ ಉದ್ಯಮಿಯೂ ಆಗಿರುವ ವಿವೇಕ್ ರಾಜ್ ಅವರ ಮನೆ ಮತ್ತು ಕಚೇರಿ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ವಿವೇಕ್ ರಾಜ್ ಅವರು ಕಾಂಗ್ರೆಸ್ ಪಕ್ಷದ ಚಿಕ್ಕಮಗಳೂರು ಜಿಲ್ಲೆಯ ಚುನಾವಣಾ ಉಸ್ತುವಾರಿ ಆಗಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ವಿವೇಕ್ ರಾಜ್ ಪೂಜಾರಿ, “ದುರುದ್ದೇಶಪೂರಿತವಾಗಿ ನನ್ನ ಮನೆಗೆ ಐಟಿ ದಾಳಿ ಮಾಡಲಾಗಿದೆ. ನನ್ನ ವ್ಯವಹಾರದ ದಾಖಲೆಪತ್ರಗಳು ಸಮರ್ಪಕವಾಗಿದ್ದು. ನಾನು ತೆರಿಗೆ ವಂಚಿಸಿ ವ್ಯವಹರಿಸುವುದಿಲ್ಲ” ಎಂದು ಹೇಳಿದ್ದಾರೆ.

Join Whatsapp