Home ಟಾಪ್ ಸುದ್ದಿಗಳು ಇದು ಉತ್ತರ ಪ್ರದೇಶವಲ್ಲ, ಬಂಗಾಳ: ಬಿಜೆಪಿಗೆ ‘ದೀದಿ’ ಟಾಂಗ್

ಇದು ಉತ್ತರ ಪ್ರದೇಶವಲ್ಲ, ಬಂಗಾಳ: ಬಿಜೆಪಿಗೆ ‘ದೀದಿ’ ಟಾಂಗ್

ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದಲ್ಲಿ ಭುಗಿಲೆದ್ದಿರುವ ಹಿಂಸಾಚಾರಕ್ಕೆ ಸಂಬಂಧಿಸಿ ಬಿಜೆಪಿ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆಗೆ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದು ಉತ್ತರ ಪ್ರದೇಶವಲ್ಲ, ಪಶ್ಚಿಮ ಬಂಗಾಳ ಎಂದು ಬಿಜೆಪಿಗೆ ಟಾಂಗ್ ನೀಡಿದ್ದಾರೆ.

ಟಿಎಂಸಿ ನಿಯೋಗವು ಉತ್ತರ ಪ್ರದೇಶದ ಹತ್ರಾಸ್‌ ನಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಉತ್ತರ ಪ್ರದೇಶಕ್ಕೆ ತೆರಳಿತ್ತು, ಆದರೆ ಯೋಗಿ ಸರಕಾರವು ನಿಯೋಗವನ್ನು ತಡೆದಿತ್ತು. ಆದರೆ ನಮ್ಮಲ್ಲಿ ಆ ರೀತಿಯ ಸಮಸ್ಯೆಗಳಿಲ್ಲ, ರಾಜ್ಯಕ್ಕೆ ಬರುವ ಯಾವ ನಿಯೋಗವನ್ನು ತಡೆಯುವುದಿಲ್ಲ ಎಂದು ಮಮತಾ ಹೇಳಿದ್ದಾರೆ.

ದೇಶದ ನಾನಾ ರಾಜ್ಯಗಳಲ್ಲಿ ಈ ರೀತಿಯ ಇಂತಹ ಘಟನೆಗಳು ನಡೆದಿವೆ. ರಾಮ್‌ಪುರಹಾಟ್‌ನಲ್ಲಿ ನಡೆದ ಘಟನೆಯ ಬಗ್ಗೆ ತನಿಖೆ ನಡೆಸಿ ನ್ಯಾಯಯುತವಾಗಿ ಕ್ರಮಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. ರಾಮ್‌ಪುರಹಾಟ್‌ ಘಟನೆ ದುರದೃಷ್ಟಕರ. ಈಗಾಗಲೇ ಒಸಿ, ಡಿಪಿಒ ರನ್ನು ವಜಾ ಮಾಡಿದ್ದೇನೆ. ನಾಳೆ ರಾಮ್‌ಪುರಹಾಟ್‌ಗೆ ಹೋಗುತ್ತೇನೆ ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದ ಬಿರ್‌ಭೂಮ್ ಜಿಲ್ಲೆಯ ರಾಮ್‌ಪುರಹಾಟ್‌ ನಲ್ಲಿ ಮಂಗಳವಾರ ನಸುಕಿನ ಜಾವ ಮನೆಗಳಿಗೆ ಬೆಂಕಿಹತ್ತಿಸಿ ಇಬ್ಬರು ಮಕ್ಕಳು ಸೇರಿದಂತೆ ಎಂಟು ಜನರನ್ನು ಕ್ರೂರವಾಗಿ ಹತ್ಯೆಗೈಯ್ಯಲಾಗಿದೆ.

Join Whatsapp
Exit mobile version