ದಿಢೀರ್ ಎಎಪಿ ತೊರೆದ ‘ವಕೀಲ್ ಸಾಬ್’

Prasthutha|

ಬೆಂಗಳೂರು: ವಕೀಲ್ ಸಾಬ್ ಎಂದು ಗುರುತಿಸಿಕೊಂಡಿರುವ ಜಗದೀಶ್ ಕೆ.ಎನ್ ಇಂದು ಆಮ್ ಆದ್ಮಿ ಪಕ್ಷಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ.

- Advertisement -


ಆಮ್ ಆದ್ಮಿ ಪಕ್ಷಕ್ಕೆ ಸೇರಿ ಪಕ್ಷ ಸಂಘಟನೆಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಇಂದು ಅಧಿಕೃತವಾಗಿ ಆಮ್ ಆದ್ಮಿ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ವೀಡಿಯೋ ಮೂಲಕ ತಿಳಿಸಿದ್ದಾರೆ. ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮತ್ತು ಕರ್ನಾಟಕ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿಯವರಿಗೆ ನನ್ನ ರಾಜೀನಾಮೆ ಪತ್ರವನ್ನು ತಲುಪಿಸಿದ್ದೇನೆ. ಆಮ್ ಆದ್ಮಿ ಪಕ್ಷದ ಪದಾಧಿಕಾರಿಗಳಿಗೂ ಈ ವಿಷಯ ಹೇಳುತ್ತಿದ್ದೇನೆ. ನನ್ನ ರಾಜೀನಾಮೆ ತಕ್ಷಣದಿಂದ ಕಾರ್ಯರೂಪಕ್ಕೆ ಬರಲಿದೆ. ನನಗೂ, ಆದ್ಮಿ ಪಕ್ಷಕ್ಕೂ ಇನ್ನು ಮುಂದೆ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಜಗದೀಶ್ ಹೇಳಿದ್ದಾರೆ.


ಕೆಲವು ತಿಂಗಳುಗಳ ಹಿಂದೆಯಷ್ಟೇ ಆಮ್ ಆದ್ಮಿ ಪಕ್ಷಕ್ಕೆ ಜಗದೀಶ್ ಸೇರ್ಪಡೆಯಾಗಿದ್ದರು.

Join Whatsapp