ಜಹಾಂಗೀರ್ಪುರಿ ಗಲಭೆ : ನ್ಯಾಯಾಂಗ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

Prasthutha|

ನವದೆಹಲಿ: ರಾಮನವಮಿ, ಹನುಮಾನ್ ಜಯಂತಿಯ ಸಂದರ್ಭದಲ್ಲಿ ನಡೆದ ಕೋಮು ಘಟನೆಗಳ ಬಗ್ಗೆ ನ್ಯಾಯಾಂಗ ತನಿಖೆ ನಡೆಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

- Advertisement -

ದೇಶದ ವಿವಿಧ ಭಾಗಗಳಲ್ಲಿ ರಾಮನವಮಿ ಮತ್ತು ಹನುಮಾನ್ ಜಯಂತಿ ಆಚರಣೆಯ ಸಂದರ್ಭದಲ್ಲಿ ನಡೆದ ಕೋಮು ಹಿಂಸಾಚಾರದ ಘಟನೆಗಳ ಬಗ್ಗೆ ನ್ಯಾಯಾಂಗ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದ್ದು “ನ್ಯಾಯಾಲಯವು ಮಂಜೂರು ಮಾಡಲು ಸಾಧ್ಯವಿಲ್ಲದ ಅಂತಹ ಪರಿಹಾರಗಳನ್ನು ಕೇಳಬೇಡಿ” ಎಂದು ಸುಪ್ರೀಂ ಕೋರ್ಟ್ ಅರ್ಜಿದಾರರಿಗೆ ಹೇಳಿದೆ.

Join Whatsapp