ದಲಿತರ ಮದುವೆ ಮೆರವಣಿಗೆಗೆ ಕಲ್ಲು ತೂರಾಟ: 10 ಮಂದಿಯ ಬಂಧನ

Prasthutha|

ಕೋಟಾ: ಜೈಪುರದ ಕೊಟ್ ಪುಟ್ಲಿ ಎಂಬಲ್ಲಿ ದಲಿತ ವ್ಯಕ್ತಿಯೊಬ್ಬರ ಮದುವೆ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ತು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಕೊಟ್ ಪುಟ್ಲಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಯ ಕುರಿತು ಸಹಾಯಕ ಪೊಲೀಸ್ ಅಧೀಕ್ಷಕ (ಎಎಸ್ಪಿ), ಸರ್ಕಲ್ ಇನ್ಸ್ ಪೆಕ್ಟರ್, ಸಬ್ ಇನ್ಸ್ ಪೆಕ್ಟರ್ ಗಳ ಪ್ರತಿಕ್ರಿಯೆಯನ್ನು ನಿರೀಕ್ಷಿಸಲಾಗುತ್ತಿದೆ.

ದಲಿತರ ಮದುವೆ ಮೆರವಣಿಗೆಗೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ರಾತ್ರಿ ಜೈಪುರದ ಕೊಟ್ ಪುಟ್ಲಿ ಎಂಬಲ್ಲಿ 10 ಮಂದಿಯನ್ನು ಬಂಧಿಸಲಾಗಿದೆ ಎಂದು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಕುಮಾರ್ ತಿಳಿಸಿದ್ದಾರೆ.

- Advertisement -

ಪೊಲೀಸರ ಬಿಗಿಭದ್ರತೆಯ ನಡುವೆಯೂ ಸುಮಾರು 15 ನಿಮಿಷಗಳ ಕಾಲ ಕಲ್ಲು ತೂರಾಟ ನಡೆದಿರುವುದು ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿತ್ತು.

ಸದ್ಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

Join Whatsapp