ಜಮ್ಮು–ಕಾಶ್ಮೀರ ಚುನಾವಣೆಯಲ್ಲಿ ಮುಖಭಂಗ: ಪಕ್ಷ ವಿಸರ್ಜಿಸಿದ ಮುಫ್ತಿ

Prasthutha|

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ (ಪಿಡಿಪಿ) ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ತಕ್ಷಣದಿಂದಲೇ ಜಾರಿಗೆ ಬರುವಂತೆ ಪಕ್ಷದ ಘಟಕವನ್ನು ವಿಸರ್ಜಿಸಿದ್ದಾರೆ.

- Advertisement -


ಹಿರಿಯ ನಾಯಕರೊಂದಿಗೆ ಸಮಾಲೋಚನೆ ನಡೆಸಿ, ಪಕ್ಷದ ನೂತನ ಪದಾಧಿಕಾರಿಗಳು ಹಾಗೂ ವಿವಿಧ ವಿಭಾಗಗಳನ್ನು ರಚಿಸಲಾಗುವುದು ಎಂದು ಪಕ್ಷ ತಿಳಿಸಿರುವುದಾಗಿ ಎಎನ್ ಐ ಟ್ವೀಟ್ ಮಾಡಿದೆ.


90 ಸದಸ್ಯ ಬಲದ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಭಾರಿ ಮುಖಭಂಗ ಅನುಭವಿಸಿರುವ ಪಿಡಿಪಿ, ಕೇವಲ ಮೂರು ಸ್ಥಾನಗಳನ್ನಷ್ಟೇ ಗೆದ್ದಿದೆ.

- Advertisement -


ಮಾಜಿ ಮುಖ್ಯಮಂತ್ರಿಯೂ ಆಗಿರುವ ಮುಫ್ತಿ ಅವರಿಗೆ ಈ ಫಲಿತಾಂಶವು ಮುಜುಗರವನ್ನುಂಟು ಮಾಡಿದೆ. ಅವರು ಫಲಿತಾಂಶದ ಬೆನ್ನಲ್ಲೇ, ಹಿರಿಯ ನಾಯಕರು ಹಾಗೂ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳೊಂದಿಗೆ ಪುನರವಲೋಕನ ಸಭೆ ನಡೆಸಿದ್ದರು.



Join Whatsapp