ಜನವರಿ 12ರಂದು ಶಿವಮೊಗ್ಗದಲ್ಲಿ ಯುವನಿಧಿಗೆ ಮುಖ್ಯಮಂತ್ರಿಗಳಿಂದ ಚಾಲನೆ : ಸಚಿವ ಎಸ್ ಮಧು ಬಂಗಾರಪ್ಪ

Prasthutha|

- Advertisement -

ಶಿವಮೊಗ್ಗ : ಡಿಪ್ಲೋಮಾ ಮತ್ತು ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಉದ್ಯೋಗಭತ್ಯೆ ನೀಡುವ ರ‍್ಕಾರದ ಮಹತ್ವಾಕಾಂಕ್ಷಿ 5ನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಜನವರಿ 12ರಂದು ನಗರದ ಫ್ರೀಡಂ ಪಾರ್ಕ್ ನ ಭವ್ಯ ವೇದಿಕೆಯಲ್ಲಿ ಚಾಲನೆ ನೀಡಲಾಗುವುದು. ಅದಕ್ಕಾಗಿ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ತಿಳಿಸಿದರು.

ಅವರು ಇಂದು ಜಿಲ್ಲಾಡಳಿತ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಶಿವಮೊಗ್ಗ, ಚಿತ್ರದುರ್ಗ, ಚಿಕ್ಕಮಗಳೂರು, ಹಾವೇರಿ ಮತ್ತು ಉಡುಪಿ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಶಿವಮೊಗ್ಗ ಜಿಲ್ಲೆಯ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳಿಗಳ ಪರ್ವಸಿದ್ಧತಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

- Advertisement -

ಈ ಕಾರ್ಯಕ್ರಮಕ್ಕೆ ಶಿವಮೊಗ್ಗ ಜಿಲ್ಲೆಯ ಯುವನಿಧಿ ಯೋಜನೆಯ ವಿದ್ಯಾವಂತ ನಿರುದ್ಯೋಗಿ ಫಲಾನುಭವಿಗಳಲ್ಲದೇ, ಅಂತಿಮ ವರ್ಷದಲ್ಲಿ ಸೆಮಿಸ್ಟರ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಡಿಪ್ಲೋಮಾ, ಪದವಿ ಮತ್ತು ಕಾಲೇಜುಗಳ ವಿಧಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆ ಇದೆ. ಕಾರ್ಯಕ್ರಮದ ವ್ಯವಸ್ಥಿತ ಆಯೋಜನೆಗಾಗಿ ಅಧಿಕಾರಿಗಳ ತಂಡಗಳನ್ನು ನಿಯೋಜಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳನ್ನು ಕರೆತರಲು ಸಾಕಷ್ಟು ಬಸ್ ವ್ಯವಸ್ಥೆ ಕಲ್ಪಿಸಲಾಗುವುದು. ಪ್ರತಿ ಬಸ್ ಗೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುವುದು, ಅಲ್ಲದೇ ಸುರಕ್ಷತೆಯ ದೃಷ್ಟಿಯಿಂದ ಪ್ರತಿ ವಿದ್ಯಾರ್ಥಿಯ ಹೆಸರು ಮತ್ತು ಮೊಬೈಲ್ ನಂಬರ್ ಸಂಗ್ರಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ವೈದ್ಯಕೀಯ ಶಿಕ್ಷಣ, ಕೌಶಲ್ಯ ಅಭಿವೃದ್ಧಿ ಸಚಿವ ಡಾ.ಶರಣಪ್ರಕಾಶ ಪಾಟೀಲ್, ಸುಮಾರು ಒಂದು ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯ ಡಿಪ್ಲೋಮಾ ಮತ್ತು ಪದವೀಧರ ನಿರುದ್ಯೋಗಿ ಯುವಕರು ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದ್ದು, ಬರುವವರಿಗಾಗಿ ವೇದಿಕೆಯ ಸಿದ್ಧತೆ, ಆಸನ ವ್ಯವಸ್ಥೆ, ವಾಹನ ನಿಲುಗಡೆ, ಊಟೋಪಹಾರ ಹಾಗೂ ಮೂಲಭೂತ ವ್ಯವಸ್ಥೆ ಒದಗಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

ಶಿವಮೊಗ್ಗ ಹಾಗೂ ನೆರೆಯ ಜಿಲ್ಲೆಗಳಿಂದ ಕರ‍್ಯಕ್ರಮಕ್ಕೆ ಆಗಮಿಸುವ ಯುವ ವಿದ್ಯರ‍್ಥಿಗಳನ್ನು ಸಮಾರಂಭ ಸ್ಥಳಕ್ಕೆ ಕರೆತರಲು ರಸ್ತೆ ಸಾರಿಗೆ ನಿಗಮ ಮತ್ತ ಖಾಸಗಿ ಒಡೆತನದ ಸುಮಾರು 800-100 ಬಸ್ಸುಗಳ ಅಗತ್ಯವಿರುವುದನ್ನು ಅಂದಾಜಿಸಲಾಗಿದೆ. ಕಾರ್ಯಕ್ರಮದಲ್ಲಿ ಅರ್ಹ ಫಲಾನುಭವಿಗಳಾಗುವವರು ಹಾಗೂ ಅಂತಿಮ ವರ್ಷದ ಸೆಮಿಸ್ಟರ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಡಿಪ್ಲೋಮಾ, ಪದವಿ ಕಾಲೇಜುಗಳ ಪ್ರಶಿಕ್ಷಣಾರ್ಥಿ ಗಳನ್ನು ನಿರೀಕ್ಷಿಸಲಾಗುತ್ತಿದೆ. ನಂತರ ಜಿಲ್ಲೆಯ ಗಡಿಭಾಗಕ್ಕೆ ಹೊಂದಿಕೊಂಡಿರುವ ಹತ್ತಿರದ ತಾಲೂಕುಗಳ ವಿದ್ಯಾರ್ಥಿಗಳನ್ನು ಕರೆತರಲು ವಾಹನ ಸೌಲಭ್ಯ ಒದಗಿಸಲಾಗುವುದು. ವಿಶೇಷವಾಗಿ ಶಿವಮೊಗ್ಗ ಜಿಲ್ಲೆಯಿಂದಲೇ ಬಹುಸಂಖ್ಯೆಯ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಹೊಂದಲಾಗಿದೆ ಎಂದರು.

ಈಗಾಗಲೇ ಯುವನಿಧಿ ಯೋಜನೆಯ ಸೌಲಭ್ಯ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ರಾಜ್ಯದ ಎಲ್ಲಾ ಫಲಾನುಭವಿಗಳಿಗೂ ಕಾರ್ಯಕ್ರಮಕ್ಕೆ ಆಗಮಿಸುವಂತೆ ಮೊಬೈಲ್ ಸಂದೇಶ ಕಳುಹಿಸಲು ಉದ್ದೇಶಿಸಲಾಗಿದೆ. ವಿವಿಧ ಸ್ಥಳಗಳಿಂದ ಕಾರ್ಯಕ್ರಮಕ್ಕೆ ಹೊರಡುವ ವಿದ್ಯಾರ್ಥಿಗಳನ್ನು ನೋಡಿಕೊಳ್ಳಲು ಪ್ರತಿ ಬಸ್ ಒಂದಕ್ಕೆ ನೋಡಲ್ ಅಧಿಕಾರಿಗಳನ್ನು ನೇಮಿಸಬೇಕು. ನಿಯೋಜಿತ ಅಧಿಕಾರಿ-ಸಿಬ್ಬಂಧಿಗಳ ಯೋಗಕ್ಷೇಮ ಮತ್ತು ಜವಾಬ್ದಾರಿ ತೆಗೆದುಕೊಳ್ಳುವಂತೆ ಅವರು ಸೂಚಿಸಿದರು.

ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ ಸಿ ಸುಧಾಕರ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಮತ್ತು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಉಮಾ ಮಹದೇವನ್, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದ ಆಯುಕ್ತೆ ಡಾ.ರಾಗಪ್ರಿಯಾ ಆರ್, ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಮಿಥುನ್ ಕುಮಾರ್ ಜಿ.ಕೆ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ ಸೇರಿದಂತೆ ಚಿಕ್ಕಮಗಳೂರು, ಉಡುಪಿ, ಚಿತ್ರದರ್ಗ ಮತ್ತು ಹಾವೇರಿ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಉಪಸ್ಥಿತರಿದ್ದರು.

Join Whatsapp