ಜನಾರ್ದನ ರೆಡ್ಡಿ ಹೊಸ ಪಕ್ಷ ಕಟ್ಟಿ ತಪ್ಪು ಮಾಡಿದ್ದಾರೆ: ಸಹೋದರ ಸೋಮಶೇಖರ ರೆಡ್ಡಿ

Prasthutha|

- Advertisement -

ಬಳ್ಳಾರಿ: ಜನಾರ್ದನ ರೆಡ್ಡಿ ಅವರು ಹೊಸ ಪಕ್ಷ ಕಟ್ಟಿ ತಪ್ಪು ಮಾಡಿದ್ದಾರೆ. ನಾನು ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ ಎಂದು ಜನಾರ್ದನ ರೆಡ್ಡಿ ಸಹೋದರ ಸೋಮಶೇಖರ ರೆಡ್ಡಿ ಹೇಳಿದ್ದಾರೆ.

ಈ ಬಗ್ಗೆ ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ ಪಕ್ಷ ಸ್ಥಾಪನೆ ಬೇಡವೆಂದರೂ ಅವರು ಕೇಳಲಿಲ್ಲ ರಾಜಕೀಯದಲ್ಲಿ ತಾಳ್ಮೆ ಅಗತ್ಯ. ಅವರು ತಪ್ಪಾದ ನಿರ್ಧಾರ ತೆಗೆದುಕೊಂಡಿದ್ದಾರೆ. ಈಗಲೂ ಅವರ ಮನವೊಲಿಸುವ ಪ್ರಯತ್ನವನ್ನು ಶ್ರೀರಾಮುಲು ಅವರು ಮಾಡುತ್ತಿದ್ದಾರೆ. ಆದರೆ ಚುನಾವಣಾಪೂರ್ವದಲ್ಲಿ ಅದು ಅಸಾಧ್ಯ ಎಂದು ಹೇಳಿದ್ದಾರೆ.

Join Whatsapp