ಜಾರಕಿಹೊಳಿ ಸಿಡಿ ಪ್ರಕರಣ ; ಯುವತಿಗೆ ಅನಗತ್ಯ ಸಂದೇಹ ಬೇಡ: ಬಸವರಾಜ ಬೊಮ್ಮಾಯಿ ಹೇಳಿಕೆ

Prasthutha|

►‘ಪ್ರಕರಣದ ತನಿಖೆ ಸರಿಯಾದ ದಿಕ್ಕಿನಲ್ಲೇ ನಡೆಯುತ್ತಿದೆ’

- Advertisement -

ಕಲಬುರ್ಗಿ: ಮಾಜಿ ಸಚಿವ, ಶಾಸಕ ರಮೇಶ ಜಾರಕಿಹೊಳಿ ಅವರ ಸಿಡಿ ಪ್ರಕರಣಕ್ಕೆ ಸಂಬಂಧಿಸಿ ಗೃಹಸಚಿವ ಬಸವರಾಜ ‌ಬೊಮ್ಮಾಯಿ ಹೇಳಿಕೆ ನೀಡಿದ್ದು, ಈ ಬಗ್ಗೆ ಯುವತಿಗೆ ಅನಗತ್ಯ ಸಂದೇಹ ಬೇಡ ಎಂದು ಹೇಳಿದ್ದಾರೆ. ಪ್ರಕರಣದ ಬಗ್ಗೆ ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಡಿ ಪ್ರಕರಣ ತನಿಖೆಯು ಸರಿಯಾದ ದಿಕ್ಕಿನಲ್ಲೇ ನಡೆಯುತ್ತಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ನ್ಯಾಯ ಸಮ್ಮತವಾದ ಕೆಲಸ ಮಾಡಲು ಸೂಚನೆ ನೀಡಿದ್ದೇನೆ. ನಾವು ಸತ್ಯದ ಪರವಾಗಿದ್ದೇವೆ. ಯಾರ ಪರ ಅಥವಾ ವಿರೋಧವಾಗಿ ಇಲ್ಲ. ಅಲ್ಲಿ ನಡೆಯುವ ವಿದ್ಯಮಾನಗಳ ಬಗ್ಗೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ. ಏನಾದರೂ ಇದ್ದರೆ ಎಸ್.ಐ.ಟಿ ಅಧಿಕಾರಿಗಳೇ ಮಾಹಿತಿ ನೀಡುತ್ತಾರೆ ಎಂದು ಹೇಳಿದ್ದಾರೆ.

- Advertisement -

ಸಂತ್ರಸ್ತೆ ಯುವತಿಯ ವಿಚಾರಣೆಯು ಇದೀಗಾಗಲೇ ಮುಗಿದಿದ್ದು, ರಮೇಶ್ ಜಾರಕಿಹೊಳಿಯವರ ವಿಚಾರಣೆಯನ್ನು ನಿನ್ನೆ ನಡೆಸಬೇಕಾಗಿತ್ತು. ಈ ಮೊದಲು ಜ್ವರದ ನೆಪ ಹೇಳಿ ವಿಚಾರಣೆಗೆ ಆಗಮಿಸಿರಲಿಲ್ಲ. ನಿನ್ನೆ ಜಾರಕಿಹೊಳಿಗೆ ಕರೋನಾ ಪಾಸಿಟಿವ್ ಬಂದಿದ್ದು, ಗೋಕಾಕ್ ನ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ

Join Whatsapp