ಮಹಾರಾಷ್ಟ್ರ ಕಮಲ ಸರ್ಜರಿಗೆ ಜಾರಕಿಹೊಳಿ ಸಾಥ್: ಕರ್ನಾಟಕ ಮೈತ್ರಿ ಸರ್ಕಾರ ಪತನ ಮಾಡಿದ್ದ ರಮೇಶ್ ಮುಂಬೈಗೆ ದೌಡು

Prasthutha|

ಬೆಳಗಾವಿ: ಕರ್ನಾಟಕದಲ್ಲಿ ಮೈತ್ರಿ ಸರ್ಕಾರದ ಪತನಕ್ಕೆ ನೇತೃತ್ವ ವಹಿಸಿದ್ದ ರಮೇಶ್ ಜಾರಕಿಹೊಳಿ ಇದೀಗ ಮುಂಬೈ ತೆರಳಿದ್ದಾರೆ ಎಂಬ ಮಾಹಿತಿ ದೊರಕಿದೆ.

- Advertisement -

ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಸರ್ಕಾರ ಪತನದ ಅಂಚಿನಲ್ಲಿದ್ದು, ಕಮಲ ಅರಳುವ ಮುನ್ಸೂಚನೆಯೂ ತೋರುತ್ತಿದೆ.
ಕಳೆದ 3 ದಿನಗಳಿಂದ ಮುಂಬೈನಲ್ಲಿ ಬಿಡಾರ ಹೂಡಿರುವ ರಮೇಶ್ ಜಾರಕಿಹೊಳಿ, ಇಂದು ಅವರ ಆಪ್ತ ಮೂಲಗಳು ಪ್ರವಾಸದ ಬಗ್ಗೆ ಖಚಿತಪಡಿಸಿವೆ. ಮಂಗಳವಾರ ಮಧ್ಯಾಹ್ನದವರೆಗೂ ದೇವೇಂದ್ರ ಫಡ್ನಾವಿಸ್ ಜೊತೆ ಜಾರಕಿಹೊಳಿ ಇದ್ದರು ಎನ್ನಲಾಗುತ್ತಿದೆ. 

ಅವರ ಮುಂಬೈ ಪ್ರವಾಸ ಕುತೂಹಲವನ್ನು ಮೂಡಿಸುತ್ತಿರುವುದರೊಂದಿಗೆ, ಮೈತ್ರಿ ಸರಕಾರ ಮುರಿಯುವುದೇ ಜಾರಕಿಹೊಳಿ ಕೆಲಸವೇ ಎಂಬ ಪ್ರಶ್ನೆ ಸಾಮಾಜಿಕ ವಲಯದಲ್ಲಿ ಕೇಳಿ ಬರುತ್ತಿದೆ

Join Whatsapp