ನನ್ನ ಗಮನಕ್ಕೆ ತರದೇ ವಿಚ್ಛೇದನ ಘೋಷಿಸಿದ್ದಾರೆ: ಜಯಂ ರವಿ ವಿರುದ್ಧ ಪತ್ನಿ ಆರತಿ ಆಕ್ರೋಶ

Prasthutha|

ನವದೆಹಲಿ: ತಮಿಳಿನ ಖ್ಯಾತ ನಟ ಜಯಂ ರವಿ ಅವರು ಪತ್ನಿ ಆರತಿಗೆ ವಿಚ್ಛೇದನ ನೀಡುವ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ಬೆನ್ನಲ್ಲೇ ‘ನನಗೆ ಗೊತ್ತಿಲ್ಲದೆ ವಿಚ್ಛೇದನ ಘೋಷಿಸಿದ್ದಾರೆ’ ಎಂದು ಆರತಿ ಅವರು ಪೋಸ್ಟ್ ಹಂಚಿಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -


ಡಿವೋರ್ಸ್ ಕುರಿತು ಸುದೀರ್ಘವಾಗಿ ಆರತಿ ಪತ್ರ ಬರೆದಿದ್ದಾರೆ. ಅದರಲ್ಲಿ, ಇತ್ತೀಚೆಗೆ ನಮ್ಮ ಮದುವೆ ಬಗ್ಗೆ ಸಾರ್ವಜನಿಕವಾಗಿ ಮಾಡಿದ ಘೋಷಣೆಯಿಂದ ನನಗೆ ಶಾಕ್ ಆಗಿದೆ. ಯಾಕೆಂದರೆ ನನಗೆ ಗಮನಕ್ಕೆ ತರದೆ, ನನ್ನ ಅನುಮತಿಯನ್ನು ಪಡೆಯದೆ ಇಂತಹ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. 18 ವರ್ಷಗಳ ಕಾಲ ದಾಂಪತ್ಯದ ಇತಿಹಾಸವಿರುವ ವಿಷಯವನ್ನು ಗೌರವಯುತವಾಗಿ, ಖಾಸಗಿಯಾಗಿ ಹ್ಯಾಂಡಲ್ ಮಾಡಬಹುದಿತ್ತು ಎಂದಿದ್ದಾರೆ.


‘ಇಬ್ಬರ ಕುಟುಂಬವನ್ನು ಗೌರವಿಸುವ ದೃಷ್ಟಿಯಿಂದ ನನ್ನ ಪತಿಯೊಂದಿಗೆ ನೇರವಾಗಿ ಮಾತನಾಡಲು ಹಲವಾರು ಬಾರಿ ಪ್ರಯತ್ನಿಸಿದೆ. ಆದರೆ ಬೇಸರದ ವಿಷಯವೆಂದರೆ ಪರಸ್ಪರ ಮಾತನಾಡಲು ಸಾಧ್ಯವಾಗಲೇ ಇಲ್ಲ. ಈಗ ಅವರು ಮಾಡಿರುವ ದಿಢೀರ್ ಘೋಷಣೆಯಿಂದ ನನಗೆ ಮತ್ತು ನನ್ನ ಮಕ್ಕಳಿಗೆ ಕತ್ತಲೆ ಕವಿದಂತಾಗಿದೆ. ಇದು ಒಂದು ಕಡೆಯ ನಿರ್ಧಾರವಾಗಿದೆ, ಇದರಿಂದ ನಮ್ಮ ಕುಟುಂಬಕ್ಕೆ ಯಾವ ಪ್ರಯೋಜನವಿಲ್ಲ’ ಎಂದಿದ್ದಾರೆ.

- Advertisement -


ಜಯಂ ಅವರ ಘೋಷಣೆಯಿಂದ ಹಲವು ಟ್ರೋಲ್ಗಳು ಕಾಮೆಂಟ್ಗಳು ಕೇಳಿಬಂದ ಹಿನ್ನೆಲೆ ಪ್ರತಿಕ್ರಿಯಿಸುತ್ತಿರುವುದಾಗಿ ಹೇಳಿರುವ ಆರತಿ, ‘ಈ ರೀತಿಯ ಘೋಷಣೆಯಿಂದ ಸಾರ್ವಜನಿಕವಾಗಿ ಟೀಕೆಗಳು ವ್ಯಕ್ತವಾಗಿವೆ, ಅನ್ಯಾಯವಾಗಿ ನನ್ನ ಮೇಲೆ ಆರೋಪ ಹೊರಿಸಿ ನನ್ನ ಮೇಲೆ ಸಾರ್ವಜನಿಕವಾಗಿ ಕೆಟ್ಟ ಅಭಿಪ್ರಾಯ ಮೂಡುವಂತೆ ಮಾಡಿರುವುದನ್ನು ಸಹಿಸಿಕೊಳ್ಳುವುದು ಕಷ್ಟಕರವಾಗಿದೆ’ ಎಂದಿದ್ದಾರೆ.
‘ಒಬ್ಬ ತಾಯಿಯಾಗಿ ನನಗೆ ನನ್ನ ಮಕ್ಕಳೇ ಮೊದಲ ಆದ್ಯತೆ. ಈ ನಿರ್ಧಾರ ಮಕ್ಕಳ ಮೇಲೆ ಪರಿಣಾಮ ಬೀರಲು ಅವಕಾಶ ಕೊಡುವುದಿಲ್ಲ, ಅಲ್ಲದೆ ಈ ಆಧಾರರಹಿತ ಆರೋಪಗಳನ್ನೂ ಹೀಗೆಯೇ ಬಿಡುವುದಿಲ್ಲ’ ಎಂದಿದ್ದಾರೆ.



Join Whatsapp
Exit mobile version