ನಾಮಪತ್ರ ಹಿಂಪಡೆಯುವಂತೆ ಜೆಡಿಎಸ್​ ಅಭ್ಯರ್ಥಿಗೆ ಆಮಿಷ| ವಿ ಸೋಮಣ್ಣ ಸೇರಿದಂತೆ ಮೂವರ ವಿರುದ್ಧ FIR ದಾಖಲು

Prasthutha|

ಚಾಮರಾಜನಗರ: ನಾಮಪತ್ರ ಹಿಂಪಡೆಯುವಂತೆ ಜೆಡಿಎಸ್​ ಅಭ್ಯರ್ಥಿ ಆಲೂರು ಮಲ್ಲಿಕಾರ್ಜುನ ಸ್ವಾಮಿಗೆ ಆಮಿಷ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಸೇರಿದಂತೆ ಮೂವರ ವಿರುದ್ಧ ದೂರು ದಾಖಲಾಗಿದೆ.

- Advertisement -

ಚಾಮರಾಜನಗರದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯಿಂದ ದೂರು ಹಿನ್ನೆಲೆ ವಿ.ಸೋಮಣ್ಣ, ನಟರಾಜ್, ಸುದೀಪ್ ವಿರುದ್ಧ ಐಪಿಸಿ ಸೆಕ್ಷನ್ 1860(u/s 171E, 171F) ಅಡಿ ಎಫ್‌ಐಆರ್ ದಾಖಲು ಮಾಡಲಾಗಿದೆ.

ಇತ್ತೀಚೆಗೆ ಜೆಡಿಎಸ್​ ಅಭ್ಯರ್ಥಿ ಆಲೂರು ಮಲ್ಲಿಕಾರ್ಜುನ ಸ್ವಾಮಿ ಅವರಿಗೆ ನಾಮಪತ್ರ ವಾಪಸ್​ ಪಡೆದುಕೊಳ್ಳಲು ಸೋಮಣ್ಣ ಆಮಿಷವೊಡ್ಡಿದ್ದಾರೆ ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು. ಈ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆದಿದ್ದು, ರಾಜಕೀಯ ವಲಯದಲ್ಲಿ ಭಾರೀ ಸಂಚಲನವನ್ನೇ ಸೃಷ್ಟಿಸಿತ್ತು.

Join Whatsapp