ದೇವೇಗೌಡರಿಗೆ ಭದ್ರತಾ ವೈಫಲ್ಯ: ಚುನಾವಣಾ ಆಯೋಗಕ್ಕೆ ಜೆಡಿಎಸ್ ದೂರು

Prasthutha|

ತುಮಕೂರು: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಚುನಾವಣಾ ಪ್ರಚಾರ ಸಭೆಗೆ ನುಗ್ಗಿ ಕಾಂಗ್ರೆಸ್ ನ ಮಹಿಳಾ ಕಾರ್ಯಕರ್ತೆಯರು ಗದ್ದಲ ಸೃಷ್ಟಿಸಿದ ವಿಚಾರವಾಗಿ ಬಿಜೆಪಿ ಹಾಗೂ ಜೆಡಿಎಸ್ ಮಂಗಳವಾರ ಚುನಾವಣಾ ಆಯೋಗಕ್ಕೆ ದೂರು ನೀಡಿವೆ.

- Advertisement -


ಮಾಜಿ ಪ್ರಧಾನಿಗೆ ಭದ್ರತಾ ಲೋಪವಾಗಿದೆ ಎಂದು ಉಭಯ ಪಕ್ಷಗಳು ತುಮಕೂರು ಲೋಕಸಭಾ ಕ್ಷೇತ್ರದ ರಿಟರ್ನಿಂಗ್ ಆಫೀಸರ್ ಗೆ ನೀಡಿದ ದೂರಿನಲ್ಲಿ ತಿಳಿಸಿವೆ. ಮಾಜಿ ಪ್ರಧಾನಿ ದೇವೇಗೌಡರಿಗೆ ಭದ್ರತಾ ವೈಫಲ್ಯವಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸಹಕಾರ ಸಚಿವ ಕೆಎನ್ ರಾಜಣ್ಣ ಪ್ರಚೋದನೆಯಿಂದ ಗಲಾಟೆ ಮಾಡಲಾಗಿದೆ. ಪ್ರಚಾರ ಸಭೆಗೆ ನುಗ್ಗಿ ಗಲಾಟೆ ಮಾಡಿದ ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕು. ಸ್ಥಳದಲ್ಲಿ ಭದ್ರತೆಗಾಗಿ ನಿಯೋಜನೆಗೊಂಡಿದ್ದ ಪೊಲೀಸರನ್ನು ಅಮಾನತು ಮಾಡಬೇಕೆಂದು ಒತ್ತಾಯಿಸಲಾಗಿದೆ. ಜೆಡಿಎಸ್ ಪಕ್ಷದ ಕಾನೂನು ವಿಭಾಗದ ಅಧ್ಯಕ್ಷ ಎಪಿ ರಂಗನಾಥ್ ಉಭಯ ಪಕ್ಷಗಳ ಪರವಾಗಿ ದೂರು ನೀಡಿದ್ದಾರೆ.

Join Whatsapp