ಅಕ್ಟೋಬರ್ 3-4ರಂದು ಜೆಡಿಎಸ್ ಅಲ್ಪಸಂಖ್ಯಾತರು, ಎಸ್ ಸಿ, ಎಸ್ ಟಿ ಹಾಗೂ ಒಬಿಸಿ ವಿಭಾಗದ ಕಾರ್ಯಾಗಾರ: ಹೆಚ್’ಡಿಕೆ

Prasthutha|

ಬಿಡದಿ: ಕಳೆದ 27ರಿಂದ ಬಿಡದಿಯ ತೋಟದಲ್ಲಿ ನಡೆಯುತ್ತಿರುವ ಜನತಾ ಪರ್ವ 1.O ಹಾಗೂ ಮಿಷನ್ 123 ಕಾರ್ಯಾಗಾರದ ಮೊದಲ ಹಂತ ನಾಳೆ ಸಂಜೆ (ಸೆಪ್ಟೆಂಬರ್ 30) ಮುಕ್ತಾಯವಾಗಲಿದೆ.

- Advertisement -

ಎರಡನೇ ಹಂತದ ಕಾರ್ಯಾಗಾರವೂ ಅಕ್ಟೋಬರ್ 3 ಮತ್ತು 4 ರಂದು ಎರಡು ದಿನಗಳ ಕಾಲ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

ಅ. 3ರಂದು ಬೆಳಗ್ಗೆ 9 ಗಂಟೆಗೆ ಜೆಡಿಎಸ್ ಅಲ್ಪಸಂಖ್ಯಾತರ ವಿಭಾಗದ ಪ್ರತಿನಿಧಿಗಳ ಕಾರ್ಯಾಗಾರ ಹಾಗೂ ಅ.4ರಂದು ಅದೇ ನಿಗದಿತ ಸಮಯದಿಂದ ಎಸ್ ಸಿ, ಎಸ್ ಟಿ ಹಾಗೂ ಒಬಿಸಿ ವಿಭಾಗದ ಪ್ರತಿನಿಧಿಗಳ ಕಾರ್ಯಾಗಾರ ಇರುತ್ತದೆ ಎಂದು ಅವರು ಮಾಹಿತಿ ನೀಡಿದರು.

- Advertisement -

ಸೆಪ್ಟೆಂಬರ್ 27ರಿಂದ 30ರ ವರೆಗೆ ನಡೆದ ಕಾರ್ಯಾಗಾರದಂತೆ ಅಲ್ಪಸಂಖ್ಯಾತರ ಮತ್ತು ಎಸ್ ಸಿ, ಎಸ್ ಟಿ ಹಾಗೂ ಒಬಿಸಿ ವಿಭಾಗದ ಕಾರ್ಯಾಗಾರವೂ ನಡೆಯುತ್ತಿದೆ. ಮುಂದಿನ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ನಿಗದಿ ಮಾಡುವುದು ಹಾಗೂ ಅದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವ ಬಗ್ಗೆ ಟಾಸ್ಕ್ ಗಳನ್ನು ಕೊಡಲಾಗುವುದು ಎಂದು ಅವರು ತಿಳಿಸಿದರು.

ಈ ಸಮುದಾಯಗಳಿಗೆ ವಿಶ್ವಾಸ ತುಂಬುವುದು ಸೇರಿ ಚುನಾವಣೆಗೆ ಸಜ್ಜುಗೊಳಿಸುವುದು ಈ ಕಾರ್ಯಾಗಾರದ ಉದ್ದೇಶ. ಈ ವಿಭಾಗಕ್ಕೆ ಸೇರಿದ ಎಲ್ಲಾ ಮುಖಂಡರು ಭಾಗಿಯಾಗಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

Join Whatsapp