Home ಟಾಪ್ ಸುದ್ದಿಗಳು ಜೆಡಿಎಸ್ ಮುಖಂಡ ಡಾ. ತಿಪ್ಪೇಸ್ವಾಮಿ ವೆಂಕಟೇಶ್ ಆಮ್ ಆದ್ಮಿ ಪಾರ್ಟಿಗೆ ಸೇರ್ಪಡೆ

ಜೆಡಿಎಸ್ ಮುಖಂಡ ಡಾ. ತಿಪ್ಪೇಸ್ವಾಮಿ ವೆಂಕಟೇಶ್ ಆಮ್ ಆದ್ಮಿ ಪಾರ್ಟಿಗೆ ಸೇರ್ಪಡೆ

ಬೆಂಗಳೂರು: ಜೆಡಿಎಸ್ ರಾಜ್ಯ ಪರಿಷತ್ ಸದಸ್ಯ ಡಾ. ತಿಪ್ಪೇಸ್ವಾಮಿ ವೆಂಕಟೇಶ್ ವಿ.ಟಿ.ಎಸ್. ಅವರು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹಾಗೂ ರಾಜ್ಯ ಸಂವಹನಾ ಉಸ್ತುವಾರಿಗಳಾದ ಬ್ರಿಜೇಶ್ ಕಾಳಪ್ಪ ಸಮ್ಮುಖದಲ್ಲಿ ಆಮ್ ಆದ್ಮಿ ಪಾರ್ಟಿಗೆ ಶನಿವಾರ ಸೇರ್ಪಡೆಯಾದರು.


ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಚೇರಿಯಲ್ಲಿ ಡಾ. ತಿಪ್ಪೇಸ್ವಾಮಿ ವೆಂಕಟೇಶ್ ರವರನ್ನು ಪಕ್ಷಕ್ಕೆ ಸ್ವಾಗತಿಸಿ ಮಾತನಾಡಿದ ಪೃಥ್ವಿ ರೆಡ್ಡಿ, “ಡಾ. ತಿಪ್ಪೇಸ್ವಾಮಿ ವೆಂಕಟೇಶ್‌ರವರು ಕೃಷಿಯಲ್ಲಿ ಬಿಎಸ್ಸಿ, ಎಂಬಿಎ ಹಾಗೂ ಪಿಜಿಡಿಎಇಎಂ ಶಿಕ್ಷಣ ಪಡೆದಿದ್ದಾರೆ. ಕೆಎಸ್‌ಆರ್‌ಟಿಸಿ, ಬಿಬಿಎಂಪಿ, ಎಸ್‌ಬಿಐ ಹಾಗೂ ಕೃಷಿ ಇಲಾಖೆಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ಅಪಾರ ಅನುಭವವನ್ನು ಇವರು ಹೊಂದಿದ್ದಾರೆ. ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ತಮ್ಮ 40ನೇ ವಯಸ್ಸಿನಲ್ಲಿ ಸರ್ಕಾರಿ ನೌಕರಿಯನ್ನು ತ್ಯಜಿಸಿ ರಾಜಕೀಯ ಪ್ರವೇಶಿಸಿದ್ದರು. ಇಂತಹ ಸುಶಿಕ್ಷಿತ ಹಾಗೂ ಜನಪರ ಕಾಳಜಿಯುಳ್ಳ ನಾಯಕರು ಆಮ್ ಆದ್ಮಿ ಪಾರ್ಟಿ ಸೇರುತ್ತಿರುವುದು ಸಂತಸ ತಂದಿದೆ” ಎಂದು ಹೇಳಿದರು.

Join Whatsapp
Exit mobile version