ಜೆಡಿಎಸ್ ಮುಖಂಡ ವೈಎಸ್’ವಿ ದತ್ತ ಡಿಸೆಂಬರ್‌ 17ರಂದು ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಸೇರ್ಪಡೆ

Prasthutha|

ಬೆಂಗಳೂರು: ಜೆಡಿಎಸ್‌ ಹಿರಿಯ ನಾಯಕ, ಕಡೂರು ಕ್ಷೇತ್ರದ ಮಾಜಿ ಶಾಸಕ ವೈಎಸ್‌’ವಿ ದತ್ತ ಜೆಡಿಎಸ್‌ಗೆ ಗುಡ್‌ ಬೈ ಹೇಳಿ ಕಾಂಗ್ರೆಸ್ ಸೇರಲು ವೇದಿಕೆ ಸಿದ್ಧವಾಗಿದೆ.

- Advertisement -

ಡಿಸೆಂಬರ್‌ 17 ರಂದು ವೈಎಸ್‌ವಿ ದತ್ತ ಅವರು ಕಾಂಗ್ರೆಸ್‌’ಗೆ ಸೇರುವ ಸಾಧ್ಯತೆ ಇದೆ.  ಡಿಸೆಂಬರ್‌ 15ರಂದು ವೈಎಸ್‌ವಿ ದತ್ತ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಲಿದ್ದು, ಅಂದೇ ಕಾಂಗ್ರೆಸ್‌ ಸೇರ್ಪಡೆ ವಿಚಾರವನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ.

ಅದಾದ ಬಳಿಕ ಡಿಸೆಂಬರ್‌ 17ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆಯಲಿರುವ ಕಾಂಗ್ರೆಸ್‌ ಸಮಾವೇಶದಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವೈಎಸ್‌ವಿ ದತ್ತ ಕಾಂಗ್ರೆಸ್‌ ಸೇರುತ್ತಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

Join Whatsapp
Exit mobile version