Home ಟಾಪ್ ಸುದ್ದಿಗಳು ತುಮಕೂರು ಶಾಸಕ ಎಸ್.ಆರ್.ಶ್ರೀನಿವಾಸ್ ವಿರುದ್ಧ ಗುಬ್ಬಿ ಜೆಡಿಎಸ್ ಪ್ರತಿಭಟನೆ: ಪ್ರತಿಕೃತಿ ದಹಿಸಿ ಆಕ್ರೋಶ

ತುಮಕೂರು ಶಾಸಕ ಎಸ್.ಆರ್.ಶ್ರೀನಿವಾಸ್ ವಿರುದ್ಧ ಗುಬ್ಬಿ ಜೆಡಿಎಸ್ ಪ್ರತಿಭಟನೆ: ಪ್ರತಿಕೃತಿ ದಹಿಸಿ ಆಕ್ರೋಶ

ತುಮಕೂರು: ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡುವ ಮೂಲಕ ಜೆಡಿಎಸ್ ಪಕ್ಷಕ್ಕೆ ಅನ್ಯಾಯ ಮಾಡಿದ ಶಾಸಕ ಎಸ್.ಆರ್.ಶ್ರೀನಿವಾಸ್ ಕೂಡಲೇ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ ಗುಬ್ಬಿ ಜೆಡಿಎಸ್ ಘಟಕ ಶಾಸಕರ ವಿರುದ್ಧ ಘೋಷಣೆ ಕೂಗಿ ಪಟ್ಟಣದ ಬಸ್ ನಿಲ್ದಾಣ ಬಳಿ ಪ್ರತಿಭಟನೆ ನಡೆಸಿ ಪ್ರತಿಕೃತಿ ದಹಿಸಿ ಆಕ್ರೋಶ ಹೊರ ಹಾಕಿದರು.

ಪಟ್ಟಣದ ಸುಭಾಷನಗರ ಬಡಾವಣೆಯಲ್ಲಿನ ಜೆಡಿಎಸ್ ಕಚೇರಿಯಿಂದ ಮೆರವಣಿಗೆ ಮೂಲಕ ಬಸ್ ನಿಲ್ದಾಣ ತಲುಪಿದ ಜೆಡಿಎಸ್ ಕಾರ್ಯಕರ್ತರು ಶಾಸಕರ ವಿರುದ್ದ ಘೋಷಣೆ ಕೂಗಿ ಕೋಮುವಾದದ ಬಿಜೆಪಿ ಪಕ್ಷಕ್ಕೆ ಮತ ನೀಡಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದ ಗುಬ್ಬಿ ಶಾಸಕರು ವಚನ ಭ್ರಷ್ಟರು ಹಾಗೂ ಹಣಕ್ಕೆ ತಮ್ಮ ಮತ ಮಾರಿಕೊಂಡವರು. ಈ ಕೂಡಲೇ ರಾಜೀನಾಮೆ ಸಲ್ಲಿಸಬೇಕು ಎಂದು ಒತ್ತಾಯಿಸಿದರು.

ನಂತರ ಶಾಸಕರ ಪ್ರತಿಕೃತಿ ದಹಿಸಿ ಘೋಷಣೆ ಕೂಗಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಚಿಕ್ಕೀರಯ್ಯ, ಫಿರ್ದೋಸ್ ಆಲಿ, ಸಂಜಯ್, ನಾಗರಾಜ್, ಡಿ.ರಘು, ಸಂತೋಷ್, ಗೋಪಾಲಗೌಡ, ಮನೋಜ್, ನವೀನ್ ಇತರರು ಇದ್ದರು.

Join Whatsapp
Exit mobile version