Home ಟಾಪ್ ಸುದ್ದಿಗಳು ಬೆಂಗಳೂರು | ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಆಗ್ರಹಿಸಿ ಪಟಾಕಿ ಸಿಡಿಸಿ ಪ್ರತಿಭಟಿಸಿದ ಜೆಡಿಎಸ್ ಕಾರ್ಯಕರ್ತರು

ಬೆಂಗಳೂರು | ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಆಗ್ರಹಿಸಿ ಪಟಾಕಿ ಸಿಡಿಸಿ ಪ್ರತಿಭಟಿಸಿದ ಜೆಡಿಎಸ್ ಕಾರ್ಯಕರ್ತರು

ಬೆಂಗಳೂರು: ಬೆಂಗಳೂರಿನಲ್ಲಿರುವ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಒತ್ತಾಯಿಸಿ ಮೆಜೆಸ್ಟಿಕ್ ರೈಲು ನಿಲ್ದಾಣದ ಬಳಿ ಸೋಮವಾರ ಜೆಡಿಎಸ್ ಕಾರ್ಯಕರ್ತರು ಗುಂಡಿಯಲ್ಲಿ ಪಟಾಕಿ ಸಿಡಿಸುವ ಮೂಲಕ ಪ್ರತಿಭಟನೆ ನಡೆಸಿದರು.

ದೀಪಾವಳಿ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ ನೇತೃತ್ವದಲ್ಲಿ ಸಭೆ ಸೇರಿದ ಜೆಡಿಎಸ್ ಕಾರ್ಯಕರ್ತರು ಬೆಂಗಳೂರಿನಲ್ಲಿರುವ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಆಗ್ರಹಿಸಿದರು.

ಈ ಸಮಸ್ಯೆಗಳನ್ನು ಮುಂದಿನ 15 ದಿನಗಳಲ್ಲಿ ಬಗೆಹರಿಸದಿದ್ದರೆ BBMP ವ್ಯಾಪ್ತಿಯಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಪ್ರತಿಭಟನಕಾರರು ಎಚ್ಚರಿಸಿದ್ದಾರೆ.

ಈ ಕುರಿತ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ರಸ್ತೆ ಗುಂಡಿಗಳಲ್ಲಿ ಪಟಾಕಿಗಳನ್ನು ಸಿಡಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Join Whatsapp
Exit mobile version