Home ಟಾಪ್ ಸುದ್ದಿಗಳು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ ಜೀಪ್ : ಪ್ರಯಾಣಿಕರು ಸೇಫ್

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ ಜೀಪ್ : ಪ್ರಯಾಣಿಕರು ಸೇಫ್

ಕುಶಾಲನಗರ: ಚಾಲಕನ ನಿಯಂತ್ರಣ ತಪ್ಪಿದ ಜೀಪ್ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಅಪ್ಪಳಿಸಿ ಮಗುಚಿ ಬಿದ್ದಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಹುಣಸವಾಡಿ ಬಳಿ ನಡೆದಿದೆ.

ಮೈಸೂರು ಕಡೆಯಿಂದ ಕುಶಾಲನಗರ ಕಡೆಗೆ ಬರುತ್ತಿದ್ದ ಮಹೇಂದ್ರ ಥಾರ್ ಜೀಪ್ ವೇಗದ ಚಾಲನೆಯಿಂದ ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ ಪರಿಣಾಮ  ಜಖಂಗೊಂಡಿದೆ. ಅದೃಷ್ಟವಶಾತ್ ಜೀಪ್ ನಲ್ಲಿ ಪ್ರಯಾಣಿಸುತ್ತಿದ್ದ ಚಾಲಕ ಯಶ್ವಂತ್ ಸೇರಿ ಮತ್ತೊಬ್ಬ ಪ್ರಯಾಣಿಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Join Whatsapp
Exit mobile version