ಜಾರ್ಖಂಡ್: ಜೈ ಶ್ರೀರಾಮ್ ಕೂಗುವಂತೆ ಒತ್ತಾಯಿಸಿ ಮುಸ್ಲಿಮ್ ವಿದ್ಯಾರ್ಥಿಗೆ ಗಂಭೀರ ಹಲ್ಲೆ

Prasthutha|

ಜೆಮ್‌ಶೆಡ್‌ಪುರ: ಜೈ ಶ್ರೀರಾಮ್ ಕೂಗುವಂತೆ ಬಲವಂತ ಪಡಿಸಿದ ಸಂಘಪರಿವಾರ ಕಾರ್ಯಕರ್ತರು 9ನೇ ತರಗತಿಯ ಮುಸ್ಲಿಮ್ ವಿದ್ಯಾರ್ಥಿಗೆ ಗಂಭೀರವಾಗಿ ಹಲ್ಲೆ ನಡೆಸಿದ ಘಟನೆ ಜಾರ್ಖಂಡ್ ಸಮೀಪದ ಜೆಮ್‌ಶೆಡ್‌ಪುರದಲ್ಲಿ ನಡೆದಿದೆ.

- Advertisement -

ಘಟನೆಯ ಕುರಿತು ಟ್ವಿಟ್ಟರ್ ನಲ್ಲಿ ವೀಡಿಯೋದ ಮೂಲಕ ಪ್ರತಿಕ್ರಿಯಿಸಿದ ಸಂತ್ರಸ್ತ ವಿದ್ಯಾರ್ಥಿ, ನನ್ನನ್ನು ಸುತ್ತುವರಿದ ಸುಮಾರು ಐದಾರು ಮಂದಿ ಸಂಘಪರಿವಾರದ ಕಾರ್ಯಕರ್ತರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಅವರ ಪೋಟೋ ತೋರಿಸಿ ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಬಲವಂತಪಡಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಸಂಘಪರಿವಾರದ ಕಾರ್ಯಕರ್ತರಿಂದ ಗಂಭೀರವಾಗಿ ಹಲ್ಲೆಗೊಳಗಾದ ಸಂತ್ರಸ್ತ ವಿದ್ಯಾರ್ಥಿಯನ್ನು ಅಲ್ತಮಶ್ ಹುಸೇನ್ ಎಂದು ಗುರುತಿಸಲಾಗಿದ್ದು, 9ನೇ ತರಗತಿಯ ಕಲಿಯುತ್ತಿದ್ದಾರೆ ಎಂದು ತಿಳಿದುಬಂದಿದೆ.

- Advertisement -

ಜಾರ್ಖಂಡ್ ನಲ್ಲಿ ಈ ಹಿಂದೆಯೂ ಕೂಡ ಮುಸ್ಲಿಮರನ್ನು ಗುರಿಯಾಗಿಸಿ ನಿರಂತರ ಗುಂಪು ಹಿಂಸೆಗಳು ವರದಿಯಾಗುತ್ತಲೇ ಇದ್ದು, ಮುಖ್ಯಮಂತ್ರಿ ಹೇಮಂತ್ ಸೊರೆನ್ ಸೂಕ್ತ ಕ್ರಮ ಕ್ರಮ ಜರುಗಿಸಬೇಕು ಎಂಬ ಕೂಗು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ

Join Whatsapp