ಜೆಎನ್ ಯು ವಿದ್ಯಾರ್ಥಿ ಶಾರ್ಜೀಲ್ ಇಮಾಮ್ ಗೆ ಜಾಮೀನು ನಿರಾಕರಿಸಿದ ನ್ಯಾಯಾಲಯ

Prasthutha|

ನವದೆಹಲಿ: ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪದಲ್ಲಿ ಬಂಧಿತರಾಗಿರುವ ಜೆಎನ್ ಯು ವಿದ್ಯಾರ್ಥಿ ಶಾರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ಶುಕ್ರವಾರ ತಿರಸ್ಕರಿಸಿದೆ.

- Advertisement -

2019 ರಲ್ಲಿ ಜಾಮಿಯಾ ನಗರ ಪ್ರದೇಶದಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಮತ್ತು ಹಿಂಸೆಗೆ ಪ್ರಚೋದಿಸಿದ ಆರೋಪ ಅವರ ಮೇಲಿದೆ.

ಅವರ ಭಾಷಣದ ಅಂಶಗಳು, ಶಾಂತಿ ಮತ್ತು ಸಾಮರಸ್ಯದ ಮೇಲೆ ಧಕ್ಕೆ ತರುವ ರೀತಿಯಲ್ಲಿವೆ ಎಂದು ನ್ಯಾಯಾಲಯ ಹೇಳಿದೆ.
ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅನೂಜ್ ಅಗರ್‌ ವಾಲ್ ತಮ್ಮ ಆದೇಶದಲ್ಲಿ “13.12.2019 ರಂದು ಶಾರ್ಜೀಲ್ ಮಾಡಿದ ಭಾಷಣವು ಕೋಮು ಸಾಮರಸ್ಯ ಕೆಡಿಸುವ ಅಂಶಗಳಿಂದ ಕೂಡಿದೆ ಎಂದು ಹೇಳಿದ್ದಾರೆ.

- Advertisement -

ಡಿಸೆಂಬರ್ 15, 2019 ರಂದು, ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧದ ಪ್ರತಿಭಟನೆಯಲ್ಲಿ ಜಾಮಿಯಾ ನಗರ ಪ್ರದೇಶದಲ್ಲಿ 3,000 ಕ್ಕೂ ಹೆಚ್ಚು ಜನರನ್ನು ಒಳಗೊಂಡ ಗುಂಪು ಪೊಲೀಸ್ ಸಿಬ್ಬಂದಿಯ ಮೇಲೆ ದಾಳಿ ಮಾಡಿ ಹಲವು ವಾಹನಗಳಿಗೆ ಬೆಂಕಿ ಹಚ್ಚಿತ್ತು. ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಹೊರಗೆ CAA-NRC ವಿರುದ್ಧ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಇಮಾಮ್ ಮಾಡಿದ್ದ ಭಾಷಣಗಳಿಂದ ಈ ಗುಂಪನ್ನು ಪ್ರಚೋದಿತವಾಗಿತ್ತು ಎಂದು ಪ್ರಾಸಿಕ್ಯೂಷನ್ ಆರೋಪಿಸಿತ್ತು.

ಆದರೆ ಗಲಭೆಕೋರರು ಅವರ ಭಾಷಣದಿಂದ ಪ್ರಚೋದಿತರಾದರು ಮತ್ತು ಗಲಭೆಯ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ ಎಂಬುದಕ್ಕೆ ಪುರಾವೆಗಳು ಸಾಕಾಗದು ಎಂದು ಕೋರ್ಟ್ ಹೇಳಿದೆ. ಆದರೂ ಅವರಿಗೆ ಜಾಮೀನು ನೀಡಲು ನಿರಾಕರಿಸಿತು

Join Whatsapp