ಮಧ್ಯಪ್ರದೇಶ । ಠಾಣೆಯಲ್ಲಿ ಪತ್ರಕರ್ತರನ್ನು ಒಳ ಉಡುಪಿನಲ್ಲಿ ನಿಲ್ಲಿಸಿದ ಪೊಲೀಸ್ ಅಧಿಕಾರಿಗಳ ಅಮಾನತು

Prasthutha|

ಭೋಪಾಲ್: ಪತ್ರಕರ್ತ ಮತ್ತು ಯೂಟ್ಯೂಬರ್ ಗಳನ್ನು ಠಾಣೆಯೊಳಗೆ ಒಳ ಉಡುಪಿನಲ್ಲಿ ನಿಲ್ಲಿಸಿದ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದಾರೆ.

- Advertisement -

ಯೂಟ್ಯೂಬರ್ ಸೇರಿದಂತೆ ಹಲವು ಪತ್ರಕರ್ತರನ್ನು ಬಂಧಿಸಿ ಠಾಣೆಯೊಳಗೆ ಒಳ ಉಡುಪಿನಲ್ಲಿ ನಿಲ್ಲಿಸಿದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರ ಅಮಾನವೀಯ ನಡೆಗೆ ನೆಟ್ಟಿಗರಿಂದ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.

ಇದಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಕೊತ್ವಾಲಿ ಸಿಧಿ ಮತ್ತು ಸಬ್ ಇನ್ಸ್ ಪೆಕ್ಟರ್ ಅವರನ್ನು ಅಮಾನತು ಗೊಳಿಸಲಾಗಿದೆ ಎಂದು ಹೇಳಲಾಗಿದೆ.

Join Whatsapp