ನಟ ಸಲ್ಮಾನ್ ಖಾನ್ ವಿರುದ್ಧ ಪತ್ರಕರ್ತ ದಾಖಲಿಸಿದ್ದ ಪ್ರಕರಣ ರದ್ದು

Prasthutha|

ಮುಂಬೈ: ಪತ್ರಕರ್ತರೊಬ್ಬರು ನಟ ಸಲ್ಮಾನ್ ಖಾನ್ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್ ಬೆದರಿಕೆ ಪ್ರಕರಣವನ್ನು ಬಾಂಬೆ ಹೈಕೋರ್ಟ್’ನ ನ್ಯಾ. ಭಾರತಿ ಡಾಂಗ್ರೆ ಅವರಿದ್ದ ಏಕಸದಸ್ಯ ಪೀಠ ರದ್ದುಪಡಿಸಿದೆ.

- Advertisement -


2019ರಲ್ಲಿ ಮುಂಬೈನಲ್ಲಿ ರಸ್ತೆಯಲ್ಲಿ ಸೈಕ್ಲಿಂಗ್‌ ಮಾಡುತ್ತಿದ್ದ ಸಲ್ಮಾನ್‌ ತನ್ನ ಜೊತೆ ಜಗಳವಾಡಿ ಫೋನ್‌ ಕಸಿದುಕೊಂಡಿದ್ದರು ಎಂದು ಪತ್ರಕರ್ತರೊಬ್ಬರು ಆರೋಪಿಸಿದ್ದರು. ದೂರಿನ ಹಿನ್ನೆಲೆಯಲ್ಲಿ ತನಗೆ ನೀಡಲಾದ ಸಮನ್ಸ್‌ ಪ್ರಶ್ನಿಸಿ ಸಲ್ಮಾನ್‌ ಖಾನ್‌ ಹೈಕೋರ್ಟ್‌ ಮೆಟ್ಟಿಲೇರಿದ್ದರು.



Join Whatsapp