ಉತ್ತರ ಪ್ರದೇಶ ಚುನಾವಣೆಗೆ ಮುಂಚಿತವಾಗಿ ಇಂದು ‘ಬೂತ್ ವಿಕ್ಟರಿ ಅಭಿಯಾನ’ ಪ್ರಾರಂಭಿಸಲಿರುವ ಜೆಪಿ ನಡ್ಡಾ

Prasthutha|

ದೆಹಲಿ : ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಮುಂದಿನ ವರ್ಷ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಉತ್ತರ ಪ್ರದೇಶದ 27,700 ಬೂತ್ ಗಳಲ್ಲಿ ಪಕ್ಷದ ‘ಬೂತ್ ವಿಕ್ಟರಿ ಅಭಿಯಾನ’ ವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಾರಂಭಿಸಲಿದ್ದಾರೆ.

- Advertisement -

ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್, ಪಕ್ಷದ ರಾಜ್ಯಾಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಮತ್ತು ರಾಜ್ಯದ ಇತರ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಜೆಪಿ ನಡ್ಡಾ ಅವರು ರಾಜ್ಯದ 27,700 ಬೂತ್ ಗಳಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಮತ್ತು ಚುನಾವಣೆಯ ಕಾರ್ಯತಂತ್ರದ ಬಗ್ಗೆ ಚರ್ಚಿಸಲಿದ್ದಾರೆ. ಬೂತ್ ವಿಜಯ ಅಭಿಯಾನದ ಜೊತೆಗೆ, ಪನ್ನಾ ಪ್ರಮುಖ್ ಮಾಡುವ ಅಭಿಯಾನವೂ ಪ್ರಾರಂಭವಾಗಲಿದೆ, ಇದು ಸೆಪ್ಟೆಂಬರ್ 20 ರವರೆಗೆ ಮುಂದುವರಿಯುತ್ತದೆ ಎಂದು ತಿಳಿದು ಬಂದಿದೆ.

ಇನ್ನು ರಾಜ್ಯ ಚುನಾವಣೆಗೆ ಕಾರ್ಯತಂತ್ರಗಳನ್ನು ರೂಪಿಸಲು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಎರಡು ದಿನಗಳ ಕಾಲ ರಾಜ್ಯದಲ್ಲಿರುವುದರಿಂದ ಉತ್ತರ ಪ್ರದೇಶದಲ್ಲಿ ರಾಜಕೀಯ ಚಟುವಟಿಕೆಗಳು ವೇಗ ಪಡೆದಿವೆ.ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಕಾಂಗ್ರೆಸ್ ರಾಜ್ಯದಲ್ಲಿ 12,000 ಕಿ.ಮೀ. ಕ್ರಮಿಸುವ ಪ್ರತಿಗ್ಯಾ ಯಾತ್ರೆ ನಡೆಸಲಿದೆ.

- Advertisement -

ಪಕ್ಷದ ರಾಜ್ಯ ಉಸ್ತುವಾರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಅಧ್ಯಕ್ಷತೆಯಲ್ಲಿ ನಡೆದ ಉತ್ತರ ಪ್ರದೇಶ ಕಾಂಗ್ರೆಸ್ ನ ಸಲಹಾ ಮತ್ತು ಕಾರ್ಯತಂತ್ರ ಸಮಿತಿಯ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ, ವಲಯವಾರು ಚುನಾವಣಾ ಪ್ರಚಾರ ಗಳು ಮತ್ತು ಕಾರ್ಯಕ್ರಮಗಳನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

Join Whatsapp