ಸೆ.17 ರವರೆಗೆ ದರ್ಶನ್‌, ಗ್ಯಾಂಗ್‌ಗೆ ನ್ಯಾಯಾಂಗ ಬಂಧನ ವಿಸ್ತರಣೆ

Prasthutha|

ಬೆಂಗಳೂರು:ದರ್ಶನ್‌ ಮತ್ತು ಗ್ಯಾಂಗ್‌ ನ ನ್ಯಾಯಾಂಗ ಬಂಧನ ಅವಧಿ ಸೆ.17ವರೆಗೆ ವಿಸ್ತರಣೆ ಮಾಡಿದೆ.

- Advertisement -

ಇಂದು ನ್ಯಾಯಾಂಗ ಬಂಧನದ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಎಲ್ಲಾ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ 24 ನೇ ಎಸಿಎಂಎಂ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು.

ಪವಿತ್ರಾ ಗೌಡ, ದರ್ಶನ್‌ ಸೇರಿದಂತೆ ಎಲ್ಲಾ ಆರೋಪಿಗಳ ಹೆಸರನ್ನು ಕರೆದಾಗ ಆರೋಪಿಗಳು ಎಸ್‌ ಸರ್‌ ಎಂದು ಹೇಳಿ ವಿಚಾರಣೆಗೆ ಹಾಜರಾಗಿರುವುದನ್ನು ದೃಢೀಕರಿಸಿದರು.

- Advertisement -

ಈ ವೇಳೆ ಸಂಪೂರ್ಣ ಚಾರ್ಜ್‌ಶೀಟ್‌ ನೀಡಬೇಕು. ಎಲೆಕ್ಟ್ರಾನಿಕ್ಸ್‌ ಸಾಕ್ಷ್ಯಗಳನ್ನು ಒಂದು ವಾರದಲ್ಲಿ ನೀಡಲಾಗುವುದು ಎಂದು ಪೊಲೀಸರು ತಿಳಿಸಿದ್ದರು. ಆದರೆ ಇನ್ನೂ ನೀಡಿಲ್ಲ ಎಂದು ಆರೋಪಿಗಳ ಪರ ವಕೀಲರು ವಾದಿಸಿದರು.



Join Whatsapp
Exit mobile version