PSI ಹಗರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿ: ಕಾಂಗ್ರೆಸ್ ಆಗ್ರಹ

Prasthutha|

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ PSI ಹಗರಣವನ್ನು ನ್ಯಾಯಾಂಗ ತನಿಖೆಗೆ ವಹಿಸುವಂತೆ ಕಾಂಗ್ರೆಸ್ ಕರ್ನಾಟಕ ಘಟಕ ಬೊಮ್ಮಾಯಿ ಸರ್ಕಾರವನ್ನು ಆಗ್ರಹಿಸಿದೆ.

- Advertisement -

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, “ PayCM ಬೊಮ್ಮಾಯಿಯವರೇ, ನಿಮ್ಮದೇ ಪಕ್ಷದ ಶಾಸಕರಾದ ಯತ್ನಾಳ್ ಅವರು PSI ಹಗರಣವನ್ನು ಸಿಬಿಐಗೆ ವಹಿಸಿ ಎಂದು ಹೇಳುತ್ತಿದ್ದಾರೆ. ಪರೇಶ್ ಮೇಸ್ತಾ ಪ್ರಕರಣದಲ್ಲಿ ನಿಮ್ಮ ಪಕ್ಷದವರು ಸಿಬಿಐಯನ್ನು ನಂಬದ ಸ್ಥಿತಿಯಲ್ಲಿದ್ದಾರೆ ಎಂದು ಛೇಡಿಸಿದ್ದಾರೆ.

ಹಾಗಾಗಿ PSI ಹಗರಣವನ್ನು ನ್ಯಾಯಾಂಗ ತನಿಖೆಗಾದರೂ ವಹಿಸಿ ಯತ್ನಾಳ್ ಅವರ ಸವಾಲು ಸ್ವೀಕರಿಸಿ. 40 ಶೇಕಡಾ ಸರ್ಕಾರದ ಕುರಿತ ತನಿಖೆಯ ಬಗ್ಗೆ ಅವರಿಗೂ ನಂಬಿಕೆಯಿಲ್ಲ ಎಂದು ಕಾಂಗ್ರೆಸ್ ಟೀಕಿಸಿದೆ.

Join Whatsapp