ತೆಲಂಗಾಣ ಶಾಲಾ ಪಠ್ಯದಲ್ಲಿ ಈಗಲೂ ಸಿಎಂ ಆಗಿರುವ ಕೆ. ಚಂದ್ರಶೇಖರ್

Prasthutha|

ಹೈದರಾಬಾದ್‌: ತೆಲಂಗಾಣದ ಶಾಲೆಗಳಲ್ಲಿ ವಿತರಿಸಲಾಗಿರುವ ಪಠ್ಯಪುಸ್ತಕಗಳಲ್ಲಿ ಹಿಂದಿನ ವರ್ಷದ ಮುನ್ನಡಿಯನ್ನೇ ಬಳಸಲಾಗಿದ್ದ ಪರಿಣಾಮ ಕೆ.ಚಂದ್ರಶೇಖರ್‌ ಅವರನ್ನೇ ‘ಮುಖ್ಯಮಂತ್ರಿ’ ಎಂದು ಉಲ್ಲೇಖಿಸಲಾಗಿದೆ. ಇದರಿಂದ ಕಾಂಗ್ರೆಸ್‌ ಸರ್ಕಾರಕ್ಕೆ ಭಾರಿ ಮುಜುಗರ ಉಂಟಾಗಿದೆ.

- Advertisement -

ಜೂನ್‌ 12ರಂದು ಶಾಲೆಗಳು ಆರಂಭವಾಗಿವೆ. ಸರ್ಕಾರಿ ಶಾಲೆಗಳಲ್ಲಿ 1 ರಿಂದ 10ನೇ ತರಗತಿವರೆಗೆ ಓದುತ್ತಿರುವ ಮಕ್ಕಳಿಗೆ ವಿತರಿಸಿರುವ ಪುಸ್ತಕಗಳಲ್ಲಿ ಹಳೇ ಮುನ್ನುಡಿಯನ್ನೇ ಬಳಸಲಾಗಿದೆ.

ಈ ಬಗ್ಗೆ ತನಿಖೆ ನಡೆಸಿ, ಇದಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು’ ಎಂದು ತೆಲಂಗಾಣ ರಾಜ್ಯ ಯುನೈಟೆಡ್ ಟೀಚರ್ಸ್ ಫೆಡರೇಷನ್‌ ಸರ್ಕಾರವನ್ನು ಒತ್ತಾಯಿಸಿದೆ.

- Advertisement -

ರಾಜ್ಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯ (ಎಸ್‌ಸಿಇಆರ್‌ಟಿ) ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿಯೇ ಈ ಲೋಪ ಆಗಿದೆ ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಚಾವಾ ರವಿ ಆರೋಪಿಸಿದ್ದಾರೆ.

ಕಳೆದ ವರ್ಷ ಶಾಲಾ ಪಠ್ಯಪುಸ್ತಗಳ ಮುಖಪುಟದಲ್ಲಿ ಸೇರಿಸಲಾಗಿದ್ದ ಸಂವಿಧಾನದ ಮುನ್ನುಡಿಯಲ್ಲಿ ‘ಸಮಾಜವಾದ’ ಮತ್ತು ‘ಜಾತ್ಯತೀತ’ ಪದಗಳನ್ನು ಕೈಬಿಡಲಾಗಿತ್ತು ಎಂದೂ ಸ್ಮರಿಸಿದ್ದಾರೆ.

ಕೆಸಿಆರ್‌ ಹೆಸರಿರುವುದಕ್ಕೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ವಿತರಿಸಲು ಉದ್ದೇಶಿಸಿದ್ದ ಪಠ್ಯಪುಸ್ತಕಗಳನ್ನು ಕಾಂಗ್ರೆಸ್‌ ಸರ್ಕಾರ ಹಿಂಪಡೆದಿದೆ ಎಂದು ಪ್ರತಿಪಕ್ಷ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

Join Whatsapp
Exit mobile version